Home Mangalorean News Kannada News ಮುಚ್ಚುವ ಹಂತದಲ್ಲಿದ್ದ ಕುಂದಬಾರಂದಾಡಿ ಶಾಲೆಯನ್ನು ಮೇಲೆತ್ತಲು ಕೈ ಜೋಡಿಸಿದ ಹಳೆ ವಿದ್ಯಾರ್ಥಿ ಸಂಘ

ಮುಚ್ಚುವ ಹಂತದಲ್ಲಿದ್ದ ಕುಂದಬಾರಂದಾಡಿ ಶಾಲೆಯನ್ನು ಮೇಲೆತ್ತಲು ಕೈ ಜೋಡಿಸಿದ ಹಳೆ ವಿದ್ಯಾರ್ಥಿ ಸಂಘ

Spread the love

ಮುಚ್ಚುವ ಹಂತದಲ್ಲಿದ್ದ ಕುಂದಬಾರಂದಾಡಿ ಶಾಲೆಯನ್ನು ಮೇಲೆತ್ತಲು ಕೈ ಜೋಡಿಸಿದ ಹಳೆ ವಿದ್ಯಾರ್ಥಿ ಸಂಘ

ಕುಂದಾಪುರ: ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿಗೊಳಿಸಲು ಪೋಷಕರು ಹಿಂದೇಟು ಹಾಕುತ್ತಿರುವ ಹೊತ್ತಲ್ಲೇ, ಜಿಲ್ಲೆಯ ತೀರಾ ಗ್ರಾಮೀಣ ಪ್ರದೇಶವೊಂದರ ಸರ್ಕಾರಿ ಶಾಲೆಯನ್ನು ಉಳಿಸಿ, ಬೆಳೆಸಲು ದಾನಿಗಳ ಸಹಾಯದಿಂದ ಹಳೆ ವಿದ್ಯಾರ್ಥಿ ಸಂಘ ಹಾಗೂ ಊರಿನವರು ಕೈ ಜೋಡಿಸಿದ್ದಾರೆ.

1929 ರಲ್ಲಿ ಕುಂದಾಪುರ ತಾಲ್ಲೂಕಿನ, ಬೈಂದೂರುಶಿಕ್ಷಣ ವಲಯದ ಕುಂದಬಾರಂದಾಡಿಯಲ್ಲಿ ಸ್ಥಾಪಿತವಾಗಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂದಿನ 2029 ನೇ ಇಸವಿ ಶತಮಾನದ ಸಂಭ್ರಮಾಚರಣೆ ನಡೆಯಬೇಕಾಗಿದೆ. ಕುಂದಬಾರಂದಾಡಿ ಪರಿಸರದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಾರ್ಜನೆಯ ಕನಸನ್ನು ನನಸು ಮಾಡಿ, ಅವರ ಭವಿಷ್ಯದ ಜೀವನಕ್ಕೆ ಭದ್ರ ನೆಲೆಯನ್ನು ಒದಗಿಸಿದ್ದ ಈ ಶಾಲೆ ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವ ಕಾರಣಕ್ಕಾಗಿ ಗಮನ ಸೆಳೆದಿತ್ತು. ಶತಮಾನೋತ್ಸವದ ಹೊಸ್ತಿಲಲ್ಲಿ ನಿಂತಿರುವ ನಮ್ಮೂರು ಶಾಲೆ ಯಾವುದೇ ಕಾರಣಕ್ಕೂ ಕಳೆ ಕುಂದಬಾರದು ಹಾಗೂ ಶತಮಾನದ ಇತಿಹಾಸವುಳ್ಳ ಈ ವಿದ್ಯಾ ದೇಗುಲ ಮುಚ್ಚ ಬಾರದು ಎನ್ನುವ ನಿಶ್ಚಯ ಮಾಡಿದ್ದ ಊರಿನವರು ಹಾಗೂ ಹಳೆ ವಿದ್ಯಾರ್ಥಿಗಳು ಈ ಶಾಲೆಯ ಉಳಿಯುವಿಕೆಗಾಗಿ ಕಾರ್ಯಯೋಜನೆ ರೂಪಿಸಿದ್ದರು. ಸ್ಥಳೀಯ ಪ್ರಮುಖರಾದ ಹೊಳ್ಮಗೆ ಸಿಂಗಾರಿ ಶಿವರಾಮ್ ಶೆಟ್ಟಿ ಕುಟುಂಬಸ್ಥರನ್ನು ಸಂಪರ್ಕಿಸಿ ಶಾಲೆಯನ್ನು ಉಳಿಸುವ ನಮ್ಮ ಕನಸುಗಳಿಗೆ ಜೊತೆಯಾಗುವಂತೆ ಒಕ್ಕೊರಲ ಮನವಿ ಮಾಡಿದ್ದರು.

ಸ್ಥಳೀಯ ವಿದ್ಯಾಭಿಮಾನಿಗಳ ಆಸೆಗಳಿಗೆ ಪ್ರೋತ್ಸಾಹದ ನೀರೇರೆದ ಈ ಕುಟುಂಬದ ಅಳಿಯ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯಾಗಿ ನಿವೃತ್ತರಾದ ಬಿ.ಎನ್.ಶೆಟ್ಟಿಯವರು, ಕುಟುಂಬ ಸದಸ್ಯರನ್ನು ಒಟ್ಟು ಮಾಡಿ, ಶಾಲೆಯ ಅಭಿವೃದ್ಧಿಗೆ ಊರುಗೋಲಾಗುವ ತೀರ್ಮಾನವನ್ನು ಪ್ರಕಟಿಸುತ್ತಾರೆ. ಶಾಲೆಯ ಅಭಿವೃದ್ಧಿ ಯೋಜನೆಯನ್ನು ರೂಪಿಸಿ, ಒಟ್ಟು ವೆಚ್ಚದ ಮೂರನೇ ಒಂದು ಪಾಲನ್ನು ಹೊಳ್ಮಗೆ ಸಿಂಗಾರಿ ಶಿವರಾಮ್ ಶೆಟ್ಟಿ ಕುಟುಂಬದಿಂದ ನೀಡುತ್ತಾರೆ. ಸರ್ಕಾರದ ನಿಯಮಾನುಸಾರದಂತೆ ಒಟ್ಟು ವೆಚ್ಚದ ಮೂರನೇ ಒಂದು ಪಾಲನ್ನು ನೀಡಿದ್ದ ಕುಟುಂಬದ ಹಿರಿಯರಾದ ಹೊಳ್ಮಗೆ ಸಿಂಗಾರಿ ಶಿವರಾಮ್ ಶೆಟ್ಟಿ ಹೆಸರನ್ನು ಶಾಲೆಗೆ ಮರು ನಾಮಕರಣ ಮಾಡಲು ತೀರ್ಮಾನಿಸಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿತ್ತು.

ದಾನಿಗಳು ಹಾಗೂ ಪ್ರಾಕ್ತನ ವಿದ್ಯಾರ್ಥಿಗಳ ನೆರವಿನಿಂದ ಶಾಲೆಯ ಅಭ್ಯುದಯಕ್ಕೆ ಕಾರ್ಯ ಯೋಜನೆಗಳು ವ್ಯವಸ್ಥಿತವಾಗಿ ನಡೆಯುತ್ತಿದೆ. ಸರ್ಕಾರದಿಂದ ಅನುಮತಿಯೂ ದೊರಕಿ, ಇದೀಗ ಶಾಲೆ ಹೊಳ್ಮಗೆ ಶ್ರೀಮತಿ ಸಿಂಗಾರಿ ಶಿವರಾಮ್ ಶೆಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಬಾರಂದಾಡಿ ಎನ್ನುವ ಹೆಸರಿನೊಂದಿಗೆ ಪುನರ್ ನಾಮಕರಣಗೊಂಡು ಹೊಸ ಹುರುಪಿನೊಂದಿಗೆ ಶಿಕ್ಷಣ ಯಜ್ಞವನ್ನು ಆರಂಭಿಸಿದೆ

ಆಂಗ್ಲ ಮಾಧ್ಯಮ ಆರಂಭ…
ಸ್ಥಲೀಯ ಪೋಷಕರ ಬೇಡಿಕೆಗೆ ಪೂರಕವಾಗಿ ಈ ವರ್ಷದಿಂದಲೇ 1 ಮತ್ತು 2 ನೇ ತರಗತಿಯನ್ನು ಆಂಗ್ಲ ಮಾಧ್ಯಮದಲ್ಲಿ ಆರಂಭಿಸಲಾಗಿದೆ. ಉತ್ತಮ ವಿದ್ಯಾರ್ಜನೆ ನೀಡಲು ಮೂವರು ಅರೆಕಾಲಿಕ ಶಿಕ್ಷಕರನ್ನು ನೇಮಕಗೊಳಿಸಲಾಗಿದೆ. ತನ್ನೂರಿನ ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ದೊರಕಿಸಲು ಇಡೀ ಊರು ಒಟ್ಟಾಗಿದೆ. ಪ್ರಸ್ತುತ ಎಲ್ಕೆಜಿಯಿಂದ 7 ನೇ ತರಗತಿಯವರೆಗೆ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಅವಕಾಶ ಇದೆ. ಮೂವರು ಸರ್ಕಾರಿ ಶಿಕ್ಷಕರಿದ್ದು, ಮೂವರು ಗೌರವ ಶಿಕ್ಷಕರು ಇದ್ದಾರೆ. ಆಟದ ಮೈದಾನ, ಕ್ರೀಡಾ ತರಬೇತಿ, ಯೋಗ ತರಬೇತಿ, ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಕ್ಲಾಸ್, ಕೌಶಲ್ಯ ತರಬೇತಿಯಂತಹ ಹತ್ತಾರು ಯೋಜನೆಯ ಕನಸುಗಳು ಇಲ್ಲಿದೆ.

ಜಿಲ್ಲೆಗೆ ಮಾದರಿ ಶಾಲೆಯ ಕನಸು…
2029 ಕ್ಕೆ ಈ ಶಾಲೆ ಆರಂಭವಾಗಿ 100 ಸಂವತ್ಸರಗಳು ಪೂರ್ಣಗೊಳ್ಳುತ್ತವೆ. ಹೀಗಾಗಿ ಶತಮಾನೋತ್ಸವ ಸಂಭ್ರಮದ ವೇಳೆಗೆ ಜಿಲ್ಲೆಗೆ ಮಾದರಿ ಸರ್ಕಾರಿ ಶಾಲೆಯನ್ನಾಗಿಸುವ ಕನಸುಗಳೊಂದಿಗೆ, ದಾನಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಭಿಮಾನಿಗಳು ಒಟ್ಟಾಗಿ ಅಭಿವೃದ್ಧಿಯ ಯೋಜನೆಗಳ ಗುರಿಯನ್ನು ಇರಿಸಿಕೊಂಡಿದೆ. ಇದಕ್ಕೆ ಶಿಕ್ಷಕ – ರಕ್ಷಕ ಸಂಘ, ಸ್ಥಳೀಯ ಗೆಳೆಯರ ತಂಡಗಳು, ಹಕ್ಲಾಡಿ ಲಯನ್ಸ್ ಕ್ಲಬ್ ಸಾಥ್ ನೀಡುತ್ತಿದೆ.

ಉದ್ಘಾಟನೆ ಹಾಗೂ ಪ್ರಾರಂಭೋತ್ಸವ :
ಶಾಲೆಯ ಪ್ರಧಾನ ಪೋಷಕರಾದ ಬಿ.ಎನ್.ಶೆಟ್ಟಿ ಹಾಗೂ ಇತರಗಣ್ಯರ ಉಪಸ್ಥಿತಿಯಲ್ಲಿ ಶಾಲೆಯ ಮರುನಾಮಕರಣ, ಕೆಜಿ ತರಗತಿಗಳ ಉದ್ಘಾಟನೆ ಹಾಗೂ ಪ್ರಾರಂಭೋತ್ಸವ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕ ಬಿ.ಗೋಪಾಲಕೃಷ್ಣ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಹಕ್ಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಮೊಗವೀರ ಅವರು ನೂತನ ನಾಮಫಲಕ ಅನಾವರಣಾ ಮಾಡಿದರು. ಪ್ರದೀಪ್ ಎಮ್.ಚಂದನ್, ಕೆಜಿ ತರಗತಿಯನ್ನು ಉದ್ಘಾಟಿಸಿದರು.

ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಚಿತ್ತಾರ ನಿಶ್ಮಿತ ಇವರನ್ನು ಸನ್ಮಾನಿಸಿ, ಬಗ್ವಾಡಿ ಮೆತ್ತಿನ ಮನೆ ವೆಂಕಮ್ಮ ರಾಮಣ್ಣ ಶೆಟ್ಟಿ ಟ್ರಸ್ಟ್ ವತಿಯಿಂದ ತಲಾ 5,000 ರೂ. ನೀಡಲಾಯಿತು. ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಾನಿಕ ಬಗ್ವಾಡಿ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಅನ್ವಿತ್ ಕುಮಾರ್ ಅವರಿಗೆ, ಶೋಭ ಬಿ.ಎನ್ ಶೆಟ್ಟಿ ಹೊಳ್ಮಗೆ ಅವರು ತಲಾ 10,000 ರೂ. ವಿತರಿಸಿದರು. ಪ್ರಧಾನ ಪೋಷಕರು ಕೊಡುಗೆಯಾಗಿ ನೀಡಿದ ಸಮವಸ್ತ್ರ, ಪಠ್ಯಪುಸ್ತಕ, ಶಾಲಾ ಬ್ಯಾಗ್ ಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಶಾಲಾ ಅಭಿವೃದ್ಧಿಗೆ ಧನ ಸಹಾಯ ಹಾಗೂ ಕೊಡುಗೆಗಳನ್ನು ನೀಡಿದ ದಾನಿಗಳನ್ನು ಗೌರವಿಸಲಾಯಿತು.

ಸುಭಾಷ್ ಶೆಟ್ಟಿ ಹೊಳ್ಮಗೆ, ಕಲ್ಪನಾ ಅಶೋಕ್ ಕುಮಾರ ಶೆಟ್ಟಿ, ಶಂಕರ ಹೆಗ್ಡೆ ಹೊಳ್ಮಗೆ, ಭಾಸ್ಕರ್ ಪೂಜಾರಿ, ರತ್ನ ಜಿ ಶ್ರೀಯಾನ್, ರವೀಂದ್ರ ಶೆಟ್ಟಿ, ರಾಘವೇಂದ್ರ ಮೊಗವೀರ, ಸುನೀಲ್ ಮುಂಬೈ, ನಾಗೇಶ್ ನಾಯ್ಕ್, ಸತೀಶ್, ಯೋಗೀಶ್, ಸತೀಶ್ ಶೆಟ್ಟಿ ಸೇರಿದಂತೆ ಇಲಾಖಾ ಅಧಿಕಾರಿಗಳು, ಹಳೆ ವಿದ್ಯಾರ್ಥಿಗಳು, ಎಸ್ಡಿಎಂಸಿ ಸಮಿತಿಯವರು, ಲಯನ್ಸ್ ಕ್ಲಬ್ ಸದಸ್ಯರು, ಚೆನ್ನಕೇಶವ ಯುವಕ ಮಂಡಲ, ಚಿಕ್ಕು ಫ್ರೆಂಡ್ಸ್ ಸದಸ್ಯರು ಹಾಗೂ ಊರಿನವರು ಇದ್ದರು.


Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version