Home Mangalorean News Kannada News ಮೂರ್ಜೆ ಸುನಿತಾ ಪ್ರಭು ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಗೆ ಆಯ್ಕೆ

ಮೂರ್ಜೆ ಸುನಿತಾ ಪ್ರಭು ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಗೆ ಆಯ್ಕೆ

Spread the love

ಮೂರ್ಜೆ ಸುನಿತಾ ಪ್ರಭು ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಗೆ ಆಯ್ಕೆ

ಬೆಳ್ತಂಗಡಿ: ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಘೋಷಿಸಲಾದ ಪ್ರದಾನ ಮಂತ್ರಿ ಬಲ ಪುರಸ್ಕಾರ ಪ್ರಶಸ್ತಿ ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ರವರಿಗೆ ಒಲಿದಿದೆ . ಈ ಪುರಸ್ಕಾರ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ

ಪ್ರತಿಭಾನ್ವಿತೆಯಾಗಿರುವ ಈಕೆ 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಈ ಪುರಸ್ಕಾರ ಲಭಿಸಿದೆ

ಪ್ರಸಕ್ತ ಮಂಗಳೂರಿನ ಸಿ ಎಫ್ ಏ ಎಲ್ ವಿದ್ಯಾ ಸಂಸ್ಥೆಯಲ್ಲಿ ಪಿ ಯು ಸಿ ವ್ಯಾಸಂಗ ಮಾಡುತ್ತಿರುವ ಮೂರ್ಜೆ ಸುನಿತಾ ಪ್ರಭು ಬೆಳ್ತಂಗಡಿಯ ಉದ್ಯಮಿ ವಿನಾಯಕ ವುಡ್ ಇಂಡಸ್ಟ್ರೀಸ್ ನ ಮಾಲಕ ವಿವೇಕಾನಂದ ಪ್ರಭು ಮತ್ತು ಶಾಂತಲಾ ಪ್ರಭು ದಂಪತಿಯ ಪುತ್ರಿ ಉಜಿರೆ ಶ್ರೀ ಮಂಜುನಾಥೇಶ್ವರ ಸಿ ಬಿ ಯಸ್ ಸಿ ಶಾಲೆಯ ಹಳೆ ವಿದ್ಯಾರ್ಥಿನಿ.

ಜನವರಿ 22 ರಂದು ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆಯಲಿದ್ದಾರೆ . ಜೊತೆಗೆ ಜನವರಿ 26 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲೂ ಭಾಗವಹಿಸಲಿದ್ದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಪೋಷಕರಿಂದ ದೇಶ ವಿದೇಶಗಳ ಗಣ್ಯ ಅತಿಥಿಗಳನ್ನುಭೇಟಿಯಾಗುವ ಅವಕಾಶವಿದೆ .


Spread the love

Exit mobile version