Home Mangalorean News Kannada News ಮೋದಿ ಜನ್ಮದಿನಾಚರಣೆ; ಉಡುಪಿ ಬಿಜೆಪಿ ನಗರ ಯುವಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಮೋದಿ ಜನ್ಮದಿನಾಚರಣೆ; ಉಡುಪಿ ಬಿಜೆಪಿ ನಗರ ಯುವಮೋರ್ಚಾ ವತಿಯಿಂದ ರಕ್ತದಾನ ಶಿಬಿರ

Spread the love

ಮೋದಿ ಜನ್ಮದಿನಾಚರಣೆ; ಉಡುಪಿ ಬಿಜೆಪಿ ನಗರ ಯುವಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ, ಬಿಜೆಪಿ ಯುವಮೋರ್ಚಾ ಉಡುಪಿ ನಗರ ಮತ್ತು ರಕ್ತನಿಧಿ ವಿಭಾಗ ಕೆ.ಎಂ.ಸಿ ಮಣಿಪಾಲ ಇದರ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮದಿನದ ಪ್ರಯುಕ್ತ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಶಾಸಕ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ವಹಿಸಿದ್ದರು.

ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಯುವ ಮೋರ್ಚಾದ ಕಾರ್ಯದರ್ಶಿ ಶ್ವೇತಾ ಪೂಜಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿ ಅಮೀನ್, ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ, ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ಉಡುಪಿ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕನ್ನಾರ್, ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ, ವಿಜಯಲಕ್ಷ್ಮಿ, ಗಿರಿಧರ್ ಆಚಾರ್ಯ, ಸಂತೋಷ್ ಜತ್ತನ್, ಕೆ.ಎಂ.ಸಿ ಆಸ್ಪತ್ರೆಯ ವೈದ್ಯರುಗಳಾದ ಡಾ. ಅವಿನಾಶ್ ಶೆಟ್ಟಿ, ಡಾ.ಪದ್ಮರಾಜ್ ಹೆಗ್ಡೆ, ಡಾ,ಶಮ್ಮಿ ಶಾಸ್ತ್ರೀ ಉಪಸ್ಥಿತರಿದ್ದರು. ಪ್ರದಾನ ಕಾರ್ಯದರ್ಶಿಗಳಾದ ಸುಶಾಂತ್ ಪೂಜಾರಿ ಹಾಗೂ ಸತೀಶ್ ಸಾಲಿಯಾನ್ ಈ ಶಿಬಿರವನ್ನು ಸಂಯೋಜಿಸಿದರು.

ನಗರ ಬಿಜೆಪಿ ಪ್ರದಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್ ವಂದಿಸಿ ಮಂಜುನಾಥ್ ಮಣಿಪಾಲ ನಿರೂಪಿಸಿದರು.


Spread the love

Exit mobile version