Spread the love
ಮೋದಿ ಭೇಟಿ ಹಿನ್ನಲೆ: ನ. 26 ರ ಆದಿಉಡುಪಿ ಮುಖ್ಯಮಾರುಕಟ್ಟೆ ಪ್ರಾಂಗಣದ ಸಂತೆ ಸ್ಥಳಾಂತರ
ಉಡುಪಿ : ಭಾರತದ ಪ್ರಧಾನ ಮಂತ್ರಿಗಳು ನವೆಂಬರ್ 28 ರಂದು ಉಡುಪಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಬೇಕಿದ್ದ ನ.26 ರ ಬುಧವಾರದ ಸಂತೆಯನ್ನು ಸಂತೆಕಟ್ಟೆಯ ಕಲ್ಯಾಣಪುರ ಇಲ್ಲಿಗೆ ಸ್ಥಳಾಂತರಿಸಲಾಗಿದೆ ಮತ್ತು ಆದಿ ಉಡುಪಿ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನ. 26 ರಿಂದ 28 ರ ವರೆಗೆ ಯಾವುದೇ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಇರುವುದಿಲ್ಲ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Spread the love













