Home Mangalorean News Kannada News ಮ್ಯಾನ್ ಹೋಲ್ ಇಳಿದು ಕೆಲಸ ಮಾಡಿದ ಕಾರ್ಪೋರೇಟರ್!

ಮ್ಯಾನ್ ಹೋಲ್ ಇಳಿದು ಕೆಲಸ ಮಾಡಿದ ಕಾರ್ಪೋರೇಟರ್!

Spread the love

ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್ ಮನೋಹರ ಶೆಟ್ಟಿ!

ಮಂಗಳೂರು: ಕದ್ರಿ ಕಂಬಳ ರಸ್ತೆಯಲ್ಲಿನ ಚರಂಡಿಯಲ್ಲಿ ಮಳೆ ನೀರಿನ ಹರಿವಿನ ಸಮಸ್ಯೆಯಾಗಿ ತಡೆಯುಂಟಾದಾಗ ಸಮಸ್ಯೆ ಏನೆಂಬುದು ತಿಳಿಯಲು ಪಕ್ಕದಲ್ಲಿ ಮ್ಯಾನ್ವಲ್ ಚೇಂಬರ್ ಇದ್ದರೂ ಕಾರ್ಮಿಕರು ಅದರೊಳಗೆ ಇಳಿದು ಸಮಸ್ಯೆ ಬಗೆಹರಿಸಲು ಒಪ್ಪದೆ ಇದ್ದಾಗ ಸತಃ ಬಿಜೆಪಿ ಕಾರ್ಪೊರೇಟರ್ ಕದ್ರಿ ಮನೋಹರ್ ಶೆಟ್ಟಿಯವರು ಚೇಂಬರ್ ಒಳಗಡೆ ಇಳಿದು ಸಮಸ್ಯೆ ಏನೆಂದು ತಿಳಿದು ಕಾರ್ಮಿಕರಿಗೆ ವಿವರಿಸಿದ ಘಟನೆ ನಡೆದಿದೆ.

ಇಷ್ಟಾದ ಮೇಲೂ ತೊಡಕನ್ನು ಸರಿಪಡಿಸಲು ಕಾರ್ಮಿಕರು ಚೇಂಬರ್ ಒಳಗಡೆ ಇಳಿಯದಿದ್ದಾಗ ಕೂಡಲೇ ಕಾರ್ಪೊರೇಟರ್ ಮನೆಯಿಂದ ಒಂದು ಜೊತೆ ಬದಲಿ ಬಟ್ಟೆಯನ್ನು ತರಿಸಿ ಧರಿಸಿ ಚೇಂಬರ್ ಒಳಗಡೆ ಇಳಿದು ತಾನೇ ಸ್ವತಾ: ಕೆಲಸ ಮಾಡಿ ಸರಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜನಪರ ಜನಪ್ರತಿನಿಧಿ ಯಾವ ರೀತಿ ಇರಬೇಕು , ಇರಬಹುದು ಎಂಬುದಕ್ಕೆ ಕಾರ್ಪೊರೇಟರ್ ಮನೋಹರ ಶೆಟ್ಟಿ ಇತರರ ರಾಜಕೀಯ ನಾಯಕರಿಗೆ ನಿದರ್ಶನವಾಗಿದ್ದಾರೆ.


Spread the love

Exit mobile version