“ಯಶೋ ಮಾಧ್ಯಮ-2018” ಪ್ರಶಸ್ತಿಗೆ ಪತ್ರಿಕಾ ಛಾಯಾಗ್ರಾಹಕ ಜನಾರ್ದನ್ ಕೊಡವೂರು ಆಯ್ಕೆ

Spread the love

“ಯಶೋ ಮಾಧ್ಯಮ-2018” ಪ್ರಶಸ್ತಿಗೆ ಪತ್ರಿಕಾ ಛಾಯಾಗ್ರಾಹಕ ಜನಾರ್ದನ್ ಕೊಡವೂರು ಆಯ್ಕೆ

ಉಡುಪಿ: ಸ್ಪಂದನಾ ಸೇವಾ ಸಂಸ್ಥೆಯ ವತಿಯಿಂದ ಕೊಡಮಾಡಲ್ಪಡುವ “ಯಶೋ ಮಾಧ್ಯಮ-2018” ಪ್ರಶಸ್ತಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪಶಸ್ತಿ ಪುರಸ್ಕøತರು, ವಿಜಯವಾಣಿ ಪತ್ರಿಕೆಯ ಉಡುಪಿಯ ವರದಿಗಾರ ಹಾಗೂ ಪತ್ರಿಕಾ ಛಾಯಾಗ್ರಾಹಕರಾದ ಜನಾರ್ದನ್ ಕೊಡವೂರು ಭಾಜನರಾಗಿದ್ದಾರೆ ದಿನಾಂಕ 16-06-2018 ರ ಶನಿವಾರ ಬೆಳಗ್ಗೆ 11 ಗಂಟೆಗೆ ಉಡುಪಿಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದ ಸಂದರ್ಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ಉದ್ಘಾಟನೆಯನ್ನು ಉಡುಪಿಯ ಶಾಸಕ ಕೆ.ರಘುಪತಿ ಭಟ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ವೆಂಕಟರಮಣ ದೇವಸ್ಥಾನದ ಟ್ರಸ್ಟಿಗಳಾದ ಅನಂತ ಪದ್ಮನಾಭ ಕಿಣಿಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ “ಯಕ್ಷ ಧ್ರುವ ಪಟ್ಟ ಫೌಂಡೇಶನ್”ನ ಬೆಂಗಳೂರು ಘಟಕದ ಅಧ್ಯಕ್ಷರಾದ ಅಂಪಾರು ದಿನೇಶ್ ವೈದ್ಯ, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಉದ್ಯಮಿ ಸುಬ್ಬಣ್ಣ ಪೈ, ನರಸಿಂಹ ನಾಯಕ್, ಜಿ.ಎಸ್.ಬಿ ಸಭಾ ಅಧ್ಯಕ್ಷರಾದ ಸಂತೋಷ್ ಕಾಮತ್ ಭಾಗವಹಿಸಲಿದ್ದಾರೆ ಎಂದು ಸಂಘಟಕ ವೆಂಕಟೇಶ್ ಪೈ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love