ರಕ್ತ ಹೀನತೆಯಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಸಾವು

Spread the love

ರಕ್ತ ಹೀನತೆಯಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಸಾವು

ಮಂಗಳೂರು: ರಕ್ತ ಹೀನತೆಯಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮಡಪ್ಪಾಡಿ ಎಂಬಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿನಿಯನ್ನು ಮಡಪ್ಪಾಡಿ ಕೇವಳ ಧರ್ಮಪಾಲ ಗೌಡ ಅವರ ಪುತ್ರಿ ವಂದನಾ ಕೇವಳ (18) ಎಂದು ಗುರುತಿಸಲಾಗಿದೆ.

ವಂದನಾ ಅವರು ಸುಮಾರು ಹನ್ನೆರಡು ವರ್ಷಗಳಿಂದ ರಕ್ತ ಸಂಬಂಧಿ ಖಾಯಿಲೆಯಿಂದ ಬಳಲುತತ್ತಿದ್ದು ಕಳೆದ ಎರಡು ದಿನಗಳಿಂದ ತೀವ್ರವಾಗಿ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಕೆ ಎಮ್ ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಮೃತ ವಿದ್ಯಾರ್ಥಿನಿ ತಂದೆ ತಾಯಿ ಹಾಗೂ ಅಣ್ಣನನ್ನು ಅಗಲಿದ್ದಾರೆ.


Spread the love