ರಸ್ತೆ ಅಪಘಾತದಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

Spread the love

ರಸ್ತೆ ಅಪಘಾತದಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಗಳೂರು: ರಸ್ತೆ ಅಪಘಾತದಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಭಾನುವಾರ ಕುಂಟಿಕಾನ ಬಳಿ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಹೊಸಬೆಟ್ಟು ನಿವಾಸಿ ವೈಶಾಖ್ ಐತಾಳ್ (20) ಎಂದು ಗುರುತಿಸಲಾಗಿದೆ.

ಭಾನುವಾರ ಮಧ್ಯಾಹ್ನ ವೈಶಾಖ್ ತನ್ನ ದ್ವಿಚಕ್ರ ವಾಹನದಲ್ಲಿ ಕೆಪಿಟಿ ಯಿಂದ ಹೊಸಬೆಟ್ಟು ಕಡೆಗೆ ತೆರಳುತ್ತಿದ್ದು, ಕುಂಟಿಕಾನ ಬಳಿ 407 ಪಿಕ್ ಅಪ್ ವಾಹನವೊಂದು ದ್ವಿಚಕ್ರವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಪಿಕ್ ಅಪ್ ವಾಹನ ರಸ್ತೆಯ ಡಿವೈಡರ್ ಹಾರಿ ರಸ್ತೆಯ ಇನ್ನೊಂದು ಬದಿಗೆ ಉರುಳಿಬಿದ್ದಿದ್ದು ಈ ವೇಳೆ ವೈಶಾಕ್ ಅದೇ ರಸ್ತೆಯಲ್ಲಿ ತನ್ನ ದ್ವಿಚಕ್ರವಾಹನದಲ್ಲಿ ಬರುತ್ತಿದ್ದು ಈ ವೇಳೆ ಪಿಕ್ ವಾಹನ ಅವರ ಮೇಲೆಯೇ ಉರುಳಿಬಿದ್ದಿದೆ ಎನ್ನಲಾಗಿದೆ. ಘಟನೆಯಿಂದ ವೈಶಾಖ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವೈಶಾಖ್ ಅವರು ನಿಟ್ಟೆ ಕಾಲೇಜಿನಲ್ಲಿ ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.

ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love