ರಾಜ್ಯದಲ್ಲಿರುವ ಚರ್ಚ್‌ಗಳನ್ನು ಬುಲ್ಡೋಜರ್‌ನಿಂದ ಒಡೆಯಬೇಕು: ಪ್ರಮೋದ್ ಮುತಾಲಿಕ್

Spread the love

ರಾಜ್ಯದಲ್ಲಿರುವ ಚರ್ಚ್‌ಗಳನ್ನು ಬುಲ್ಡೋಜರ್‌ನಿಂದ  ಒಡೆಯಬೇಕು : ಪ್ರಮೋದ್ ಮುತಾಲಿಕ್
 

ಕೊಪ್ಪಳ: ‘ರಾಜ್ಯದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅನಧಿಕೃತ ಚರ್ಚ್‌ಗಳಿದ್ದು  ಅನಧಿಕೃತ ಚರ್ಚ್​ಗಳನ್ನು ಬುಲ್ಡೋಜರ್ ಮೂಲಕ ಒಡೆಯಬೇಕು ಎಂದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜನರ ಬಡತನ ಬಂಡವಾಳ ಮಾಡಿಕೊಂಡು ರಾಜ್ಯದ ತಾಂಡಗಳಲ್ಲಿ ಲಂಬಾಣಿ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ.

ಇದರ ವಿರುದ್ಧ ದೊಡ್ಡ ಹೋರಾಟ ನಡೆಯಬೇಕು. ಜನರ ಮುಗ್ದತೆಯನ್ನು ಕ್ರಿಶ್ಚಿಯನ್ನರು ಬಳಸಿಕೊಳ್ಳುತ್ತಿದ್ದಾರೆ. ಮತಾಂತರ ದೇಶಕ್ಕೆ ಅಂಟಿಕೊಂಡ ದೊಡ್ಡ ವೈರಸ್‌’ ಎಂದರು.

ಓಲೈಕೆ: ಕಾಂಗ್ರೆಸ್‌ ಪಕ್ಷ ಹಿಂದೂ ವಿರೋಧಿ ಧೋರಣೆ ನಡೆಸಿ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದೆ. ಆ ಪಕ್ಷದವರು ಯಾವಾಗಲೂ ಬಾಬರ್‌ ಪರವಾಗಿ ನಿಂತವರು. ಬಜೆಟ್‌ನಲ್ಲಿ ಚರ್ಚ್‌ ಮತ್ತು ಮಂಗಳೂರಿನ ಹಜ್‌ ಭವನಕ್ಕೆ ನೂರಾರು ಕೋಟಿ ರೂಪಾಯಿ ಘೋಷಿಸಿದ್ದಾರೆ. 100 ರಾಮ ಮಂದಿರಗಳನ್ನು ಅಭಿವೃದ್ಧಿ ಪಡಿಸುವುದಾಗಿ ಹೇಳಿದರೂ ಅದಕ್ಕಾಗಿ ನಯಾಪೈಸೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಮಮಂದಿರದ ಆನಂದ ಸಹಿಸಲು ಕಾಂಗ್ರೆಸ್‌ನವರಿಗೆ ಸಾಧ್ಯವಾಗುತ್ತಿಲ್ಲ. ದೇಶದಲ್ಲಿ ಕಾಂಗ್ರೆಸ್‌ ನಿರ್ನಾಮವಾಗುತ್ತದೆ. ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದ ಜಾಗದಲ್ಲಿಯೇ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ರಾಮನ ವಿರುದ್ಧವಾಗಿ ಯಾರೇ ಮಾತನಾಡಿದರೂ ಅವರಿಗೆ ರಾಮನ ಶಾಪ ತಟ್ಟುತ್ತದೆ’ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.


Spread the love