ರಾಜ್ಯ ಕಾಂಗ್ರೆಸ್ ಸರಕಾರ ಜನರ ನಿರೀಕ್ಷೆ ಹುಸಿಗೊಳಿಸಿದೆ: ಡಾ. ಪ್ರಕಾಶ್

Spread the love

ರಾಜ್ಯ ಕಾಂಗ್ರೆಸ್ ಸರಕಾರ ಜನರ ನಿರೀಕ್ಷೆ ಹುಸಿಗೊಳಿಸಿದೆ: ಡಾ. ಪ್ರಕಾಶ್

ಮಂಗಳೂರು: ಕೋಮುವಾದಿ ಶಕ್ತಿಗಳನ್ನು ಮಟ್ಟಹಾಕುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲಗೊಂಡಿವೆ. ಜನರ ನಿರೀಕ್ಷೆಯನ್ನು ಕಾಂಗ್ರೆಸ್ ಸರಕಾರ ಹುಸಿಗೊಳಿಸಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್‌ ಆರೋಪಿಸಿದರು.

ಕುಡುಪು ಗುಂಪು ಹತ್ಯೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು, ಸಂತ್ರಸ್ತ ಕುಟುಂಬಗಳಿಗೆ ಪರಿಹಾರಧನ ಒದಗಿಸಬೇಕು, ಗುಂಪು ಹತ್ಯೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಅಂದಿನ ಪೊಲೀಸ್‌ ಆಯುಕ್ತ ಅನುಪಮ್ ಅಗರ್ವಾಲ್‌ರನ್ನು ತನಿಖೆಗೊಳಪಡಿಸಬೇಕು, ಕೋಮುವಾದಿ ಶಕ್ತಿಗಳ ನಿಗ್ರಹಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು, ಕಳೆದೊಂದು ದಶಕಗಳಲ್ಲಿ ನಡೆದಿರುವ ಮತೀಯ ದ್ವೇಷದ ಹತ್ಯೆ ಪ್ರತೀಕಾರದ ಕೊಲೆ ತನಿಖೆಗೆ ಸಿಟ್ ರಚಿಸಬೇಕು, ಕಳೆದ ಮೂರು ದಶಕಗಳಲ್ಲಿ ನಡೆದಿರುವ ಎಲ್ಲಾ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಸೋಮವಾರ ನಗರದ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜಿಲ್ಲಾದ್ಯಂತ ಕೋಮುವಾದಿ ಶಕ್ತಿಗಳ ಅಟ್ಟಹಾಸ ಹೆಚ್ಚುತ್ತಿರುವಾಗಲೇ ಸಿಪಿಎಂ ಪಕ್ಷವು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು. ಆದರೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದಿಂದ ಜಿಲ್ಲೆಯಲ್ಲಿ ಕೋಮುಗಲಭೆ, ಕೊ ಲೆ, ಪ್ರತೀಕಾರದ ಕೊಲೆ ನಡೆದವು. ಇದಕ್ಕೆ ಸ್ಪೀಕರ್ ಯು.ಟಿ.ಖಾದರ್ ಕೂಡ ಹೊಣೆಗಾರರಾಗಿದ್ದಾರೆ ಎಂದು ಡಾ. ಪ್ರಕಾಶ್ ಆರೋಪಿಸಿದರು.

ಇದೀಗ ವಿಶೇಷ ನಿಗ್ರಹ ಪಡೆ ರಚಿಸಲಾಗಿದೆ. ಇದು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಮತೀಯವಾದಿಗಳು ತಲೆ ಎತ್ತದಂತೆ ನೋಡಿಕೊಳ್ಳಬೇಕು. ಎಲ್ಲಾ ಪ್ರಕರಣಗಳ ಸಮಗ್ರ ತನಿಖೆಗೆ ಸಿಟ್ ರಚಿಸಬೇಕು ಎಂದ ಪ್ರಕಾಶ್, ಹಿಂದು ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೆ ಸಂಬಂಧ ಇಲ್ಲ. ಹಿಂದುತ್ತ ಎಂಬುದು ಮತಬೇಟೆಗಾಗಿರುವ ರಾಜಕೀಯ ಪರಿಕಲ್ಪನೆಯಾಗಿದೆ. ತನ್ನ ರಾಜಕೀಯ ಉದ್ದೇಶವನ್ನು ಈಡೇರಿಸಲು ಅದು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ. ಹಿಂದುತ್ವವನ್ನು ಎಲ್ಲರೂ ಜೊತೆಗೂಡಿ ಸೋಲಿಸಬೇಕು ಎಂದರು.

ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಹಲವಾರು ಕೋಮು ದ್ವೇಷದ ಕೊಲೆ, ಪ್ರತೀಕಾರದ ಕೊಲೆಗಳು ನಡೆದಿವೆ. ಬಹುತೇಕ ಪ್ರಕರಣಗಳ ಆರೋಪಿಗಳು ವರ್ಷದ ಒಳಗಡೆ ಜಾಮೀನು ಪಡೆದು ರಾಜೋರೋಷವಾಗಿ ತಿರುಗಾಡು ತ್ತಿದ್ದಾರೆ. ಕಳೆದ ಮೂರು ದಶಕದ ಅವಧಿಯಲ್ಲಿ ಇಂತಹ ಕನಿಷ್ಟ ಮೂವತ್ತಕ್ಕೂ ಹೆಚ್ಚು ಕೊಲೆಗಳು ಇಲ್ಲಿ ನಡೆದಿವೆ. ಇವರಿಗೆ ರಾಜಕೀಯ ಆಶ್ರಯ ನೀಡುವವರು ಯಾರು? ಈ ಕೊಲೆಗಳ ಹಿಂದಿನ ಪಿತೂರಿ ದಾರರು ಯಾರು?, ರಾಜಕೀಯ ಫಲಾನುಭವಿಗಳು ಯಾರು? ಎಂಬುದು ಬಯಲಾಗಬೇಕಿದೆ. ಇದರ ಸತ್ಯಗಳು ಜನತೆಯ ಅರಿವಿಗೆ ಬರಬೇಕಾಗಿದೆ. ಈ ಬಗ್ಗೆ ರಾಜ್ಯ ಸರಕಾರ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ರಾಜ್ಯ ಮುಖಂಡ ಕೆ.ಯಾದವ ಶೆಟ್ಟಿ, ದೇವಿ ಮಂಡ್ಯ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಕೃಷ್ಣಪ್ಪಕೊಂಚಾಡಿ, ಸುಕುಮಾರ್ ತೊಕ್ಕೋಟು, ಬಿ.ಎಂ.ಭಟ್, ಸದಾಶಿವದಾಸ್, ಜಯಂತಿ ಶೆಟ್ಟಿ, ಯೋಗೀಶ್ ರಪಿನಗರ, ಶಕ್ತಿ, ರಪಿನಗರ, ರಪಿನಗರ ಉಪಸ್ಥಿತರಿದ್ದರು. ಮೂಡುಬಿದಿರೆ ಸಂತೋಷ್ ಬಜಾಲ್, ಬಿ.ಕೆ. ಇಮ್ಮಿಯಾಝ್, ವಸಂತಿ ಕುಪ್ಪೆಪದವು, ಮನೋಜ್ ವಾಮಂಜೂರು, ರಫೀಕ್ ಹರೇಕಳ ಮೊದಲಾದವರು ಭಾಗವಹಿಸಿದ್ದರು.


Spread the love
Subscribe
Notify of

0 Comments
Inline Feedbacks
View all comments