ರಾಮ ಮಂದಿರ ನಿರ್ಮಾಣ – ಸುಪ್ರೀಂ ತೀರ್ಪಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸ್ವಾಗತ

Spread the love

ರಾಮ ಮಂದಿರ ನಿರ್ಮಾಣ – ಸುಪ್ರೀಂ ತೀರ್ಪಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸ್ವಾಗತ

ಉಡುಪಿ: ಬಹು ದಶಕಗಳ ರಾಮ ಜನ್ಮಭೂಮಿ – ಬಾಬ್ರಿ ಮಸೀದಿ ವಿವಾದವು ಸುಪ್ರೀಂ ಕೋರ್ಟ್ ತೀರ್ಪಿನಿಂದ ತೆರೆ ಕಂಡಂತಾಗಿದೆ. ದೇಶದ ಸಂವಿಧಾನದ ಮೇಲೆ ಭರವಸೆ ಇರುವ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.

ಕೇಂದ್ರ ಸರಕಾರವೇ 3 ತಿಂಗಳ ಒಳಗೆ ಮಂದಿರ ನಿರ್ಮಾಣಕ್ಕೆ ಟ್ರಸ್ಟನ್ನು ರಚಿಸಿ ಕ್ರಮ ಕೈಗೊಳ್ಳಬೇಕು, ಮುಸ್ಲೀಮರಿಗೂ 5 ಎಕರೆ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ಪ್ರಕಟಿಸಿರುವ ಐತಿಹಾಸಿಕ ತೀರ್ಪು ಹಿಂದೂ ಮುಸಲ್ಮಾನರಲ್ಲಿ ಭಾಂಧವ್ಯ ಬೆಸೆಯಲು ಸಹಕಾರಿಯಾಗಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ದೇಶದ ಪ್ರಜೆಗಳಾದ ಹಿಂದೂ-ಮುಸಲ್ಮಾನರ ನಡುವಿನ ಶಾಂತಿ ಸೌಹಾರ್ದತೆಗಳನ್ನು ನಾವು ಕಾಪಾಡಬೇಕಾಗಿದೆ. ಎರಡು ಧರ್ಮಗಳ ನಡುವಿನ ಸೌಹಾರ್ಧತೆಗೆ ಭಂಗ ಬಂದು ಪ್ರತಿನಿತ್ಯವೆಂಬಂತೆ ಗಲಭೆ ಹಾಗೂ ಜನರ ಸಾವಿಗೆ ಕಾರಣವಾದ ಅಯೋಧ್ಯೆ ವಿವಾದ ಕೊನೆಗೊಳ್ಳುತ್ತಿರುವುದು ಅಖಂಡ ಭಾರತ ದೇಶದ ಅಭಿವೃದ್ಧಿಗೆ ಪೂರಕವಾಗುವುದರೊಂದಿಗೆ ಸುಪ್ರೀಂ ಕೋರ್ಟಿನ ಈ ತೀರ್ಪು ಸರ್ವ ಧರ್ಮಕ್ಕೂ ಸಂದ ಗೆಲುವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love