Home Mangalorean News Kannada News ರಾಷ್ಟ್ರೀಯ ಹೆದ್ದಾರಿ ದುರಸ್ಥಿಗೆ ಆಗ್ರಹಿಸಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ದುರಸ್ಥಿಗೆ ಆಗ್ರಹಿಸಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Spread the love

ರಾಷ್ಟ್ರೀಯ ಹೆದ್ದಾರಿ ದುರಸ್ಥಿಗೆ ಆಗ್ರಹಿಸಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಂಗಳೂರು: ಮಂಗಳೂರು – ಸುರತ್ಕಲ್ ರಾಷ್ಟೀಯ ಹೆದ್ದಾರಿ ‘ 66’ ಸಂಪೂರ್ಣವಾಗಿ ಹದೆಗೆಟ್ಟಿದ್ದು ಇದನ್ನು ಕೂಡಲೇ ದುರಸ್ತಿ ಗೊಳಿಸಬೇಕೇಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಮೊಹಿದಿನ್ ಬಾವ ನೇತ್ರತ್ವದಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಯಿತು.

 ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ.ಎ.ಮೊಹಿದ್ದೀನ್ ಬಾವಾ ರವರ ನೇತೃತ್ವದಲ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ದವಾಗಿ ಹೊನ್ನಕಟ್ಟೆ ಜಂಕ್ಷನ್ ನಿಂದ ಬೈಕಂಪಾಡಿ ಜಂಕ್ಷನ್ ವರೆಗೆ ಪಾದಯಾತ್ರೆ ನಡೆಸಿ ಬೈಕಂಪಾಡಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಮೊಹಿದಿನ್ ಬಾವ , ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ ಸೋಜಾ, ಬ್ಲಾಕ್ ಅಧ್ಯಕ್ಷರಾದ ಸದಾಶಿವ ಶೆಟ್ಟಿ , ಕೇಶವ ಸನೀಲ್, ಮಾಜಿ ಮೇಯರ್ ಗಳಾದ ಶಶಿಧರ ಹೆಗಡೆ, ಗುಲ್ಜಾರ್ ಬಾನು, ಪ್ರತಿಭಾ ಕುಳಾಯಿ, ಹಾರಿಸ್ ಬೈಕಂಪಾಡಿ , ಸುಹೈಲ್ ಕಂದಕ್, ಹಿದಾಯತ್ ಕೃಷ್ಣಾಪುರ, ರಾಜೇಶ್ ಕುಲಾಯಿ, ಅನಿಲ್, ಅಬ್ದುಲ್ ಜಲೀಲ್, ಹೇಮಂತ್ ಕುಮಾರ್, ಆನಂದ ಅಮೀನ್, ಕಾಂಗ್ರೇಸ್ ಪಕ್ಷದ ನಾಯಕರು , ಕಾರ್ಯಕರ್ತರು ಉಪಸ್ಥಿತರಿದ್ದರು


Spread the love

Exit mobile version