ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ, ಪುಣೆ ಬೆಂಗಳೂರು ರಸ್ತೆ ಸಂಪರ್ಕ ಕಡಿತ

Spread the love

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ, ಪುಣೆ ಬೆಂಗಳೂರು ರಸ್ತೆ ಸಂಪರ್ಕ ಕಡಿತ

ಬೆಳಗಾವಿ : ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದ್ದು ಪುಣೆ ಬೆಂಗಳೂರು ರಸ್ತೆ ಸಂಪರ್ಕ ಕಡಿತಗೊಂಡಿದೆ.

ನಾಳೆ ಮಧ್ಯಾಹ್ನದ ವರೆಗೂ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದ್ದು, ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರು ಪ್ರಯಾಣ ಮಾಡದಂತೆ ಉತ್ತರ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸೋಮವಾರ ಸಂಜೆಯಿಂದಲೇ ಬೆಳಗಾವಿ ಪೊಲೀಸರು ರಾಜ್ಯದ ಗಡಿಯಲ್ಲಿ ವಾಹನ ಸ್ಥಗಿತಗೊಳಿಸಿದ್ದಾರೆ.


Spread the love