Home Mangalorean News Kannada News ರಾಹುಲ್ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾಪು ಯುವ ಕಾಂಗ್ರೆಸ್ ಕರೆ

ರಾಹುಲ್ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾಪು ಯುವ ಕಾಂಗ್ರೆಸ್ ಕರೆ

Spread the love

ರಾಹುಲ್ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾಪು ಯುವ ಕಾಂಗ್ರೆಸ್ ಕರೆ

ಉಡುಪಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿಯವರ ಪ್ರವಾಸ ಕಾರ್ಯಕ್ರಮವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಯಶಸ್ವಿಗೊಳಿಸಬೇಕು ಎಂದು ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯದರ್ಶಿ ಸ್ಟೀವನ್ ಕುಲಾಸೊ ಕರೆ ನೀಡಿದ್ದಾರೆ.

 ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ತೆಂಕ ಎರ್ಮಾಳಿನಲ್ಲಿ ಸೇವಾದಳದ ತರಬೇತಿ ಕೇಂದ್ರ ಮತ್ತು ರಾಜೀವ್ ಗಾಂಧಿ ರಾಜಕೀಯ ತರಬೇತಿ ಸಂಸ್ಥೆಯನ್ನು ಉದ್ಘಾಟಿಸಿ, ಬಳಿಕ ತೆಂಕ ಎರ್ಮಾಳಿನಿಂದ ಪಡುಬಿದ್ರಿ ಪೇಟೆ ತನಕ ರೋಡ್ ಶೋ ನಡೆಸಲಿದ್ದಾರೆ. ಅನಂತರ ಪಡುಬಿದ್ರೆ ಪೇಟೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಹೈದರಬಾದ್ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ರೋಡ್ ಶೋ, ಸಮಾವೇಶಗಳು ಅಭೂತಪೂರ್ವ ಯಶಸ್ಸನ್ನು ಕಂಡಿದ್ದು ಅದೇ ರೀತಿಯಲ್ಲಿ ಕಾಪುವಿನಲ್ಲಿ ನಡೆಯುವ ಕಾರ್ಯಕ್ರಮಕ್ಕೂ ಕೂಡ ಹೆಚ್ಚಿನ ಸಂಖ್ಯೆಯ ಜನರು ಮಾತ್ರವಲ್ಲದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಕರೆ ನೀಡಿದ್ದಾರೆ.


Spread the love

Exit mobile version