ರೈತರಿಗೆ ಮೋಸ ಮಾಡಿದ ಕುಮಾರಸ್ವಾಮಿ ಸಂಸದ ನಳಿನ್‍ಕುಮಾರ್ ಆರೋಪ

Spread the love

ರೈತರಿಗೆ ಮೋಸ ಮಾಡಿದ ಕುಮಾರಸ್ವಾಮಿ ಸಂಸದ ನಳಿನ್‍ಕುಮಾರ್ ಆರೋಪ

ಮಂಗಳೂರು : ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಭರವಸೆ ನೀಡಿ ಕಾಂಗ್ರೆಸ್ ಕೃಪಾ ಕಟಾಕ್ಷದಲ್ಲಿ ಮುಖ್ಯಮಂತ್ರಿ ಆದ ಎಚ್.ಡಿ.ಕುಮಾರಸ್ವಾಮಿ ಅವರು ಮಾತಿಗೆ ತಪ್ಪುವ ಮೂಲಕ ಮತ್ತೆ ವಚನಭ್ರಷ್ಟರಾಗಿದ್ದಾರೆ. ರಾಜ್ಯದ ರೈತರನ್ನು ವಂಚಿಸಿದ ಕುಮಾರಸ್ವಾಮಿ ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ದ.ಕ.ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.

ಮುಖ್ಯಮಂತ್ರಿ ಆದವರು ರಾಜ್ಯದ ಎಲ್ಲ ಜನತೆಯನ್ನು ಪ್ರತಿನಿಧಿಸಬೇಕು. ಆದರೆ ಕುಮಾರಸ್ವಾಮಿ ಅವರು ರಾಜ್ಯದ ಜನತೆಯ ಮುಲಾಜಿನಲ್ಲಿ ಇಲ್ಲ. ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿ ಇದ್ದೆನೆ ಎಂದು ಹೇಳಿಕೆ ನೀಡಿದ್ದು ನಾಚಿಕೆಗೇಡಿನ ವಿಷಯ. ಸದ್ಯ ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಕುಮಾರಸ್ವಾಮಿ ರಾಜ್ಯದ ಜನತೆಗೆ ಅವಮಾನ ಮಾಡಿದ್ದಾರೆ. ರೈತರಿಗೆ ಮೋಸಮಾಡಿದ್ದಾರೆ ಎಂದು ಸಂಸದರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.


Spread the love