ಲಂಚ ಕೇಳಿದ ಆರೋಪ : ಮುಖ್ಯ ಲೆಕ್ಕಿಗ, ಸಹಾಯಕ ಲೋಕಾಯುಕ್ತ ಬಲೆಗೆ
ಮಂಗಳೂರು: ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಅಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುವ ಪಿರ್ಯಾದಿದಾರರ ಗಂಡ ಜೂನ್ 2024 ರಂದು ಮರಣ ಹೊಂದಿರುತ್ತಾರೆ. ಪಿರ್ಯಾದಿದಾರರು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಅವರ ಬಳಿ ಅವರ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರುವುದಿಲ್ಲ.
ನಂತರ ಪಿರ್ಯಾದಿದಾರರ ಖಾತೆಗೆ ಗಂಡನ ಮರಣ ಉಪದಾನವನ್ನು ಜಮೆ ಮಾಡಿಕೊಟ್ಟಿರುವ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ರೂ. 5000 ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್. ರೂ. 5000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೆÇಲೀಸ್ ಠಾಣೆಯಲ್ಲಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೇಗೌಡ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೇ 14 ರಂದು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಪಿರ್ಯಾದಿದಾರರಿಂದ ರೂ. 5000 ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ರವರು ರೂ. 5000 ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೆÇಲೀಸರ ಬಲೆಗೆ ಬಿದ್ದಿರುತ್ತಾರೆ. ಅಧಿಕಾರಿ ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಈ ಕಾರ್ಯಾಚರಣೆಯಲ್ಲಿ ಕುಮಾರಚಂದ್ರ, ಪೆÇಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೆÇಲೀಸ್ ಠಾಣೆಯ ಪೆÇಲೀಸ್ ಉಪಾಧೀಕ್ಷಕ ಡಾ.ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೆÇಲೀಸ್ ನಿರೀಕ್ಷಕಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ರವರು ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆಯನ್ನು ಕೈಗೊಂಡಿರುತ್ತಾರೆ.