ಲಾಕ್ ಡೌನ್ ನಡುವೆಯೇ ಇಸ್ಪೀಟ್ ಜುಗಾರಿ ಆಟ: ಕುಂದಾಪುರದಲ್ಲಿ 8 ಮಂದಿ ಬಂಧನ

Spread the love

ಲಾಕ್ ಡೌನ್ ನಡುವೆಯೇ ಇಸ್ಪೀಟ್ ಜುಗಾರಿ ಆಟ: ಕುಂದಾಪುರದಲ್ಲಿ 8 ಮಂದಿ ಬಂಧನ

ಕುಂದಾಪುರ: ಕೋವಿಡ್-19 ಕೊರೋನಾ ವೈರಸ್ ತಡೆಗಟ್ಟುವ ಹಿನ್ನೆಲೆ ಲಾಕ್ ಡೌನ್ ಆದೇಶವಿದ್ದರೂ ಕೂಡ ಅದನ್ನು ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪಿಟ್ ಜುಗಾರಿಯಲ್ಲಿ ನಿರತರಾಗಿದ್ದ 8 ಮಂದಿಯನ್ನು ಕುಂದಾಪುರ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕುಂಭಾಶಿ ನಿವಾಸಿ ಸುರೇಶ್ (25), ರಾಘವೇಂದ್ರ (29), ಕೇಶವ (46), ಕೃಷ್ಣ (56), ನಾಗರಾಜ್, ಗೋವರ್ಧನ್, ಸಚಿನ್, ಉಮೇಶ್ ಎಂದು ಗುರುತಿಸಲಾಗಿದೆ.

ಮೇ 4ರಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಹರೀಶ್ ಆರ್ ಅವರಿಗೆ ಕುಂದಾಪುರ ತಾಲೂಕು ಕುಂಭಾಶಿ ಗ್ರಾಮದ ನಾಗಾಚಲ ಅಯ್ಯಪ್ಪ ದೇವಸ್ಥಾನದ ಎದುರುಗಡೆ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್ ಬಾಹರ್ ಇಸ್ಪೀಟು ಆಟವಾಡುತ್ತಿದ್ದಾರೆಂದು ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ಆರೋಪಿಗಳನ್ನು ವಶಕ್ಕೆ ಪಡೆದು, ಅವರಿಂದ ಇಸ್ಪೀಟು ಜುಗಾರಿ ಆಟಕ್ಕೆ ಉಪಯೋಗಿಸಿದ ನಗದು ರೂಪಾಯಿ 4375/, ಹಳೆಯ ದಿನಪತ್ರಿಕೆ-1, ಇಸ್ಪೀಟು ಎಲೆಗಳು-52 ಇವುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಕುರಿತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love