ಲೇಡಿ ಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ವಿ.ಎಚ್.ಪಿ ಒತ್ತಾಯ

Spread the love

ಲೇಡಿ ಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ವಿ.ಎಚ್.ಪಿ ಒತ್ತಾಯ

ಮಂಗಳೂರು: ನಾರಾಯಣ ಗುರುಗಳು ಸಮಾಜದಲ್ಲಿನ ಜಾತಿಪದ್ಧತಿಯನ್ನು ತೊಡೆದು ಸಾಮರಸ್ಯ ತರಲು ಶ್ರಮಿಸಿದ ಮಹಾ ಸಂತರು ಅವ್ರ ಹೆಸರನ್ನು ಲೇಡಿಹಿಲ್ ವೃತ್ತಕ್ಕೆ ನಾಮಕರಣ ಮಾಡುವ ಮೂಲಕ ಅವರಿಗೆ ಗೌರವಾರ್ಪಣೆ, ಶೀಘ್ರವಾಗಿ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ವಿಶ್ವಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಆಗ್ರಹಿಸಿದ್ದಾರೆ

ಲೈಟ್ ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸ್ಯಾಂಸುಂದರ್ ಶೆಟ್ಟಿ ರಸ್ತೆ ಎಂದು ನಾಮಕರಣ ಸರಕಾರಕ್ಕೆ ಅಭಿನಂದನೆ – ವಿಶ್ವಹಿಂದೂ ಪರಿಷದ್ ಲೈಟ್ ಹೌಸ್ ಹಿಲ್ ರಸ್ತೆಗೆ ಮುಲ್ಕಿ ಸ್ಯಾಂಸುಂದರ್ ಶೆಟ್ಟಿ ರಸ್ತೆ ಎಂದು ನಾಮಕರಣ ಮಾಡಿರುವುದನ್ನು ವಿಶ್ವಹಿಂದೂ ಪರಿಷದ್ ಸ್ವಾಗತಿಸುತ್ತದೆ ಮತ್ತು ಸರಕಾರಕ್ಕೆ ಅಭಿನಂದಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love