ಲೋಕಸಭಾ ಚುನಾವಣೆ: ಬಿ ಫಾರಂ ಪಡೆದುಕೊಂಡ ಜೆಪಿ ಹೆಗ್ಡೆ, ಎ.2 ರಂದು ನಾಮಪತ್ರ ಸಲ್ಲಿಕೆ

Spread the love

ಲೋಕಸಭಾ ಚುನಾವಣೆ: ಬಿ ಫಾರಂ ಪಡೆದುಕೊಂಡ ಜೆಪಿ ಹೆಗ್ಡೆ, ಎ.2 ರಂದು ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ‍್ಯರ್ಥಿಯಾಗಿ ಕಣಕ್ಕಿಳಿದ ಕೆ ಜಯಪ್ರಕಾಶ್ ಹೆಗ್ಡೆ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಂದ ಬಿ ಫಾರಂ ಪಡೆದುಕೊಂಡರು.

ಕೆ ಜಯಪ್ರಕಾಶ್ ಹೆಗ್ಡೆ ಅವರು ಎಪ್ರಿಲ್ 2 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಎಪ್ರಿಲ್ 6 ರಂದು ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು 11 ಗಂಟೆಗೆ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ


Spread the love