ವಿದ್ಯಾರ್ಥಿನಿ ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ 

Spread the love

ವಿದ್ಯಾರ್ಥಿನಿ ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ 

ಉಡುಪಿ: ಗುರುವಾರ ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿ ದುಷ್ಕರ್ಮಿಯಿಂದ ಅಮಾನುಷವಾಗಿ ಕೊಲೆಗೀಡಾದ ವಿದ್ಯಾರ್ಥಿನಿ ನೇಹಾ ಅವರ ಸಾವಿಗೆ ಕಂಬನಿ ಮಿಡಿದಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ದುಷ್ಕರ್ಮಿಯ ಕೃತ್ಯವನ್ನು ಖಂಡಿಸಿದ್ದಾರೆ.

ಭವಿಷ್ಯದ ಕನಸುಗಳಿಗಾಗಿ ಬಾಳಿ ಬದುಕಬೇಕಾಗಿದ್ದ, ಶಿಕ್ಷಣಾಭ್ಯಾಸ ಮಾಡುತ್ತಿದ್ದ ನೇಹಾ ಅವರ ಹತ್ಯೆ ಮನಸ್ಸಿಗೆ ನೋವು ತಂದಿದೆ. ಆಕೆಯನ್ನು ಅಮಾನುಷವಾಗಿ ಕೊಂದಿರುವ ವಿಕೃತ ಹಾಗೂ ಕ್ರೂರ ಮನಸ್ಥಿತಿಯ ಕೊಲೆಗಾರನ ಕೃತ್ಯವನ್ನು ಸುಸಂಸ್ಕೃತ ನಾಗರಿಕ ಸಮಾಜದ ಯಾರೂ ಒಪ್ಪುವುದಿಲ್ಲ. ಆತನ ಕೃತ್ಯಕ್ಕೆ ಕಾನೂನು ಕ್ರಮದಲ್ಲಿ ಕಠಿಣ ಶಿಕ್ಷೆಯಾಗಬೇಕು. ಮುಂದೆ ಸಮಾಜದಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸಂಬಂಧಿಸಿದ ಇಲಾಖೆಗಳು ಎಚ್ಚರಿಕೆ ವಹಿಸಬೇಕು.

ನೇಹಾ ಅವರ ಪೋಷಕರ ಆಗ್ರಹದಂತೆ ಪೊಲೀಸ್ ಇಲಾಖೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಜಯಪ್ರಕಾಶ್ ಹೆಗ್ಡೆ ಅವರು, ನೇಹಾ ಅವರ ಹೆತ್ತವರು, ಸ್ನೇಹಿತರು ಹಾಗೂ ಸರ್ವ ನೊಂದ ಮನಸ್ಸುಗಳ ಜೊತೆ ನಾನಿರುವುದಾಗಿ ತಿಳಿಸಿದ್ದಾರೆ.


Spread the love

Leave a Reply