ವಿಮಾನ ಪತನ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಸಂತಾಪ

Spread the love

ವಿಮಾನ ಪತನ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಸಂತಾಪ

ಉಡುಪಿ: ಅಹಮದಾಬಾದ್ನ ಜನವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನದಿಂದ 270ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಕಥೊಲಿಕ್ ಸಭಾ ಉಡುಪಿ ಪ್ರದೇಶ ತಿಳಿಸಿದೆ.

ಪ್ರಾಥಮಿಕ ವರದಿಗಳ ಪ್ರಕಾರ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ತಾಂತ್ರಿಕ ದೋಷದಿಂದಾಗಿ ವಿಮಾನ ಪತಗೊಂಡಿರುವುದಾಗಿ ತಿಳಿದು ಬಂದಿದ್ದು ಇದೊಂದು ಭಾರಿ ದುರಂತವಾಗಿದೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಹೃದಯಪೂರ್ವಕ ಸಹಾನುಭೂತಿ ಹಾಗೂ ಸಂತಾಪ ವ್ಯಕ್ತಪಡಿಸುತ್ತೇವೆ. ನಾವು ಈ ದುರಂತದಲ್ಲಿ ಮೃತಪಟ್ಟವರ ನೋವವನ್ನು ಅರ್ಥ ಮಾಡಿಕೊಂಡಿದ್ದು, ಈ ದುಃಖದ ಗಳಿಗೆಯಲ್ಲಿ ಅವರೊಂದಿಗೆ ಸಂಪೂರ್ಣವಾಗಿ ನಿಲ್ಲಲಿದ್ದೇವೆ

ಘಟನೆಯಲ್ಲಿ ಮೃತ ಪಟ್ಟವರ ಆತ್ಮಗಳಿಗೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಸಂಘಟನೆಯ ಅಧ್ಯಕ್ಷರಾದ ರೊನಾಲ್ಡ್ ಡಿ’ಆಲ್ಮೇಡಾ ಮಾಧ್ಯಮ ಪ್ರಕಟಣೆಯಲ್ಲಿ ಹಾರೈಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments