Home Mangalorean News Kannada News ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿನಗರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿನಗರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Spread the love

ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿನಗರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿ ನಗರ ಇದರ ವತಿಯಿಂದ ದೇಶದ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.

ಅಮೇರಿಕದ ಸನತ್ ಕುಮಾರ್ ಶೆಟ್ಟಿ ತ್ರೀವರ್ಣ ಧ್ವಜವನ್ನು ಅರಳಿಸಿ ಸ್ವಾತಂತ್ರ್ಯೋತ್ಸವ ಸಂದೇಶವನ್ನು ನೀಡಿದರು.

ಇದೇ ವೇಳೆ ದೇಶದ ಯೋಧರ ಕುರಿತಾದ “ಇಂಡಿಯನ್ ಆರ್ಮಿ”ಕಿರುಚಿತ್ರವನ್ನು ಬಿಡುಗಡೆಗೊಳಿಸಲಾಯಿತು. ಅಲ್ಲದೆ ಬಡ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಖ್ಯಾತ್ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ದಯಾನಂದ ಶೆಟ್ಟಿ, ಸುಮಿತ್, ಹರೀಶ್, ಅಶೋಕ್ ಕೋಟ್ಯಾನ್, ಮಧುಸೂಧನ್, ಪ್ರಸಾದ್ ಪಾಲನ್, ಸಂದೀಪ್ ಪಾಲನ್, ರಾಘವ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ಅನಿಲ್ ಪಾಲನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


Spread the love

Exit mobile version