ಶಂಕರನಾರಾಯಣ ; ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು, ಪತಿ ಆತ್ಮಹತ್ಯೆ

Spread the love

ಶಂಕರನಾರಾಯಣ ; ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು, ಪತಿ ಆತ್ಮಹತ್ಯೆ

ಕುಂದಾಪುರ: ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ವೆ ಎಂಬಲ್ಲಿ ವ್ಯಕ್ತಿಯೊಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ.

ಮೃತರನ್ನು ಸೂರ್ಯನಾರಾಯಣ ಭಟ್ (50) ಮಾನಸಿ (40) ಸುಧೀಂದ್ರ (14) ಸುಧೀಶ್ (8) ಎಂದು ಗುರುತಿಸಲಾಗಿದೆ.

ಅಡುಗೆ ಕೆಲಸ ಮಾಡುತ್ತಿದ್ಸ ಸೂರ್ಯನಾರಾಯಣ್ ಭಟ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಊಟದಲ್ಲಿ ವಿಷವಿಕ್ಕಿದ್ದಾನೆ. ಬಳಿಕ ತೀವ್ರ ಅಸ್ವಸ್ಥರಾದ ಮೂವರಿಗೆ ರಾಡ್ ನಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ ಎನ್ನಲಾಗಿದೆ. ಮೂವರು ಪ್ರಾಣಬಿಟ್ಟ ಬಳಿಕ ಸೂರ್ಯನಾರಾಯಣ ಭಟ್ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ. ಇನ್ನು ಗಂಡ-ಹೆಂಡತಿ ನಡುವಿನ ಕೌಟುಂಬಿಕ ಕಲಹವೇ ಘಟನೆ ಕಾರಣ ಎಂದು ಶಂಕಿಸಲಾಗಿದೆ.

ಸದ್ಯ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಎಎಸ್ಪಿ ಹರಿರಾಮ್ ಶಂಕರ್, ಶಂಕರನಾರಾಯಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


Spread the love