ಶರಣ್ ಪಂಪ್ವೆಲ್ ರವರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ – ವಿಶ್ವ ಹಿಂದೂ ಪರಿಷದ್

Spread the love

ಶರಣ್ ಪಂಪ್ವೆಲ್ ರವರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ – ವಿಶ್ವ ಹಿಂದೂ ಪರಿಷದ್

ಮಂಗಳೂರು:  ಗೋ ಹತ್ಯೆ ಮಾಡಿ ಗೋವಿನ ರುಂಡವನ್ನು ಎಸೆದಿರುವ ಕೃತ್ಯವನ್ನು ಖಂಡಿಸಿ ಪತ್ರಿಕಾ ಹೇಳಿಕೆಗೆ ಶರಣ್ ಪಂಪವೆಲ್ ರವರ ಮೇಲೆ ಕೇಸು ದಾಖಲಿಸಿರುದನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ. ಕಳೆದ ಕೆಲವು ದಶಕಗಳಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಗೋಕಳ್ಳತನ /ಗೋಹತ್ಯೆ / ಅಕ್ರಮ ಗೋಸಾಗಾಟದ ಹಿಂದೆ ವ್ಯವಸ್ಥಿತ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದ್ದು ಇಡೀ ಕರಾವಳಿಯ ಜನತೆಗೆ ತಿಳಿದಿರುವ ವಿಷಯ, ಆದರೆ ಯಾರದು ಒತ್ತಡಕ್ಕೆ ಮಣಿದು ಅಥವಾ ರಾಜಕೀಯ ತುಷ್ಟಿಕರಣಕ್ಕಾಗಿ ಆ ಹೇಳಿಕೆಯನ್ನು ಕಾರಣವಾಗಿಟ್ಟುಕೊಂಡು ಕೇಸು ದಾಖಲಿಸಿರುವುದು ಅತ್ಯಂತ ಖಂಡನೀಯ, ಇದರಿಂದ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ದಕ್ಕೆಯಾವುದರ ಜೊತೆಗೆ, ಇದರಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಆದುದರಿಂದ ತಕ್ಷಣ ಪೊಲೀಸ್ ಇಲಾಖೆ ಹಾಕಿರುವ ಕೇಸನ್ನು ಹಿಂಪಡೆಯಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ ಆರ್ ಆಗ್ರಹಿಸಿದ್ದಾರೆ.

ಸಂಘಟನಾ ಕಾರ್ಯಕ್ಕೆ ಮತ್ತು ಕಾರ್ಯಕ್ರಮ ದೃಷ್ಟಿಯಿಂದ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಚಿಕ್ಕಮಗಳೂರು ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು ಖಂಡನೀಯ, ಓಲೈಕೆ ರಾಜಕಾರಣಕೋಸ್ಕರ ಹಿಂದೂ ನಾಯಕರನ್ನು ಧಮನಿಸುವ ಕೃತ್ಯವನ್ನು ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರ ಮಾಡುತ್ತಿದ್ದು, ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆ ಮತ್ತು ತಕ್ಷಣ ಈ ಆದೇಶವನ್ನು ಹಿಂದೆ ಪಡೆಯುವಂತೆ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ ಆರ್ ಪ್ರಕಟಣೆಯಲ್ಲಿ ತಿಳಿಸಿದರು


Spread the love
Subscribe
Notify of

0 Comments
Inline Feedbacks
View all comments