ಶರತ್ ಮಡಿವಾಳ ಹಂತಕರ ಬಂಧನ; ಪೋಲಿಸರಿಗೆ ಸಂಸದ ನಳಿನ್ ಅಭಿನಂದನೆ

Spread the love

ಶರತ್ ಮಡಿವಾಳ ಹಂತಕರ ಬಂಧನ; ಪೋಲಿಸರಿಗೆ ಸಂಸದ ನಳಿನ್ ಅಭಿನಂದನೆ

ಮಂಗಳೂರು: ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಇಬ್ಬರು ಹಂತಕರನ್ನು ಬಂಧಿಸಿದ ದ.ಕ.ಜಿಲ್ಲಾ ಪೋಲೀಸ್ ತಂಡವನ್ನು ಸಂಸದ ನಳಿನ್‍ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ.

ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆ ನಡೆಸುವ ವ್ಯವಸ್ಥಿತ ಕೃತ್ಯ ಕರಾವಳಿಯಲ್ಲಿ ನಡೆಯುತ್ತಿದೆ. ದೇಶದ್ರೋಹಿ ಸಂಘಟನೆಗಳು ಇದಕ್ಕೆ ಬೆಂಬಲ ನೀಡುತ್ತಿರುವುದು ಸ್ಪಷ್ಟವಾಗಿದೆ. ಪೋಲೀಸ್ ಇಲಾಖೆಯಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ನಡೆಯದಿದ್ದರೆ ದುಷ್ಕರ್ಮಿಗಳನ್ನು ಮಟ್ಟ ಹಾಕಬಹುದು. ಇದೀಗ ಶರತ್ ಹಂತಕರನ್ನು ಪತ್ತೆ ಹಚ್ಚುವಲ್ಲಿ ಪೋಲೀಸರ ಯಶಸ್ವಿಯಾಗಿರುವುದು , ಜಿಲ್ಲೆಯ ಜನತೆಗೆ ಕೊಂಚ ನೆಮ್ಮದಿ ತಂದಿದೆ. ಹತ್ಯೆಯ  ಹಿನ್ನೆಲೆ ಬಗ್ಗೆ ಸಮಗ್ರ ತನಿಖೆಯಾಗಬೇಕು. ಪ್ರಕರಣದಲ್ಲಿ ಶಾಮೀಲಾದ ಎಲ್ಲ ಹಂತಕರನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.


Spread the love