Home Mangalorean News Kannada News ಶಾಸಕರಾದ ಶಿವರಾಮ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಆರು ವರ್ಷ ಕಾಲ ಉಚ್ಚಾಟನೆ

ಶಾಸಕರಾದ ಶಿವರಾಮ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಆರು ವರ್ಷ ಕಾಲ ಉಚ್ಚಾಟನೆ

Spread the love

ಶಾಸಕರಾದ ಶಿವರಾಮ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಆರು ವರ್ಷ ಕಾಲ ಉಚ್ಚಾಟನೆ

ಬೆಂಗಳೂರು: ಹಿರಿಯ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಕಳೆದ ಮಾರ್ಚ್ 25ರಂದು ನೀಡಲಾದ ಶೋಕಾಸ್ ನೋಟಿಸ್ ಗೆ ಈ ಇಬ್ಬರು ಶಾಸಕರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಮತ್ತು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳ ಲಾಗಿದೆ ಎಂದು ಪಕ್ಷದ ಕೇಂದ್ರ ಶಿಸ್ತು ಸಮಿತಿ ಉಚ್ಚಾಟನಾ ಪತ್ರದಲ್ಲಿ ಉಲ್ಲೇಖಿಸಿದೆ..

“ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕರಾಗಿರುವ ಶಿವರಾಮ ಹೆಬ್ಬಾರ್ ಮತ್ತು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಪಕ್ಷದ ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.


Spread the love

Exit mobile version