ಶಾಸಕ ಲಾಲಾಜಿ ಸೇರಿದಂತೆ ನಾಲ್ಕು ನಿಗಮ ಮಂಡಳಿ ಅಧ್ಯಕ್ಷರ ನೇಮಕ ಹಿಂಪಡೆಯಲು ಬಿಎಸ್ ವೈ ಸೂಚನೆ

Spread the love

ಶಾಸಕ ಲಾಲಾಜಿ ಸೇರಿದಂತೆ ನಾಲ್ಕು ನಿಗಮ ಮಂಡಳಿ ಅಧ್ಯಕ್ಷರ ನೇಮಕ ಹಿಂಪಡೆಯಲು ಬಿಎಸ್ ವೈ ಸೂಚನೆ

ಬೆಂಗಳೂರು: ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾದ ಒಂದು ವರ್ಷ ಸಂಭ್ರಮದ ದಿನ 24 ಶಾಸಕರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಸೇರಿದಂತೆ 4 ನಿಗಮ ಮಂಡಳಿಗೆ ನೇಮಕ ಮಾಡಿದ ಶಾಸಕರ ನೇಮಕಾತಿಯನ್ನು ಮುಖ್ಯಮಂತ್ರಿ ವಾಪಾಸ್ ಪಡೆದಿದ್ದಾರೆ.

ಡಿ ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಕ್ಕೆ ಚಿತ್ರದುರ್ಗ ಶಾಸಕ ಹೆಚ್ ತಿಪ್ಪಾರೆಡ್ಡಿ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರಾಗಿ ಗಂಗಾವತಿ ಶಾಸಕ ಪರಣ್ಣ ಈಶ್ವರಪ್ಪ ಮುನವಳ್ಳಿ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮತ್ತು ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷರನ್ನಾಗಿ ಕನಕಗಿರಿ ಶಾಸಕ ಬಸವರಾಜ್ ದಢೇಸೂರ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದರು ಆದರೆ ಸಂಜೆಯ ವೇಳೆಗೆ ಈ ನೇಮಕಾತಿಯನ್ನು ಮುಖ್ಯಮಂತ್ರಿಗಳು ವಾಪಾಸ್ ಪಡೆದಿದ್ದಾರೆ.


Spread the love