ಶಿರಾಡಿ ಘಾಟ್ ನಲ್ಲಿ ಬಸ್ – ಕಾರು ಢಿಕ್ಕಿ; ನಾಲ್ವರು ಸ್ಥಳದಲ್ಲೇ‌ ಮೃತ್ಯು

Spread the love

ಶಿರಾಡಿ ಘಾಟ್ ನಲ್ಲಿ ಬಸ್ – ಕಾರು ಢಿಕ್ಕಿ; ನಾಲ್ವರು ಸ್ಥಳದಲ್ಲೇ‌ ಮೃತ್ಯು

ಸಕಲೇಶಪುರ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ‌ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ದಾರುಣ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಸಕಲೇಶಪುರ ಠಾಣೆ ವ್ಯಾಪ್ತಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ನಾಲ್ಕು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಮೊಬೈಲ್ ಸಂಪರ್ಕ ಇಲ್ಲದೆ ಇದ್ದುದರಿಂದ ಅಪಘಾತಕ್ಕೆ ಒಳಗಾದವರ ಜೀವ ಉಳಿಸಲು ಜನರು ಹರ ಸಾಹಸಪಟ್ಟರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love