ಶಿವರಾಜ್ ಕರ್ಕೇರಾ ಕೊಲೆ ಪ್ರಕರಣ ; ಇನ್ನಿಬ್ಬರು ಆರೋಪಿಗಳ ಬಂಧನ

Spread the love

ಶಿವರಾಜ್ ಕರ್ಕೇರಾ ಕೊಲೆ ಪ್ರಕರಣ ; ಇನ್ನಿಬ್ಬರು ಆರೋಪಿಗಳ ಬಂಧನ

ಮಂಗಳೂರು: ಪಣಂಬೂರು ಪೋಲಿಸ್ ಠಾಣಾ ವ್ಯಾಪ್ತಿಯ ಬೆಂಗ್ರೆ ಶಿವರಾಜ್ ಕರ್ಕೆರಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೋಲಿಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕುದ್ರೋಳಿ ಬೆಂಗ್ರೆ ನಿವಾಸಿ ಗಳಾದ ಅನೀಶ್ ಅಮೀನ್ (26), ವಿತರಾಜ್ (23) ಎಂದು ಗುರುತಿಸಲಾಗಿದೆ.

ಜನವರಿ 22 ರಂದು ಬೆಳಗಿನ ಜಾವ ಮನೆಯ ಟೆರೆಸ್ ಮೇಲೆ ಮಲಗಿದ್ದ ಶಿವರಾಜ್ ಕರ್ಕೇರಾ ಎಂಬವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಇದಕ್ಕೆ ಸಂಬಂಧಿಸಿ ಈಗಾಗಲೇ 5 ಜನ ಆರೋಪಿಗಳನ್ನು ಬಂಧಿಸಿದ್ದು ಬಂಧಿತರು ನ್ಯಾಯಾಂಗ ಬಂಧನದಲ್ಲಿದ್ದು, ಪ್ರಸ್ತುತ ಕೊಲೆ ಕೃತ್ಯ ಸಂಚು ರೂಪಿಸಲು ಸಹಕರಿಸಿ ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವುದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ.

ಆರೋಪಿಗಳು ಶಿವರಾಜ್ ನ ಕೊಲೆ ಕೃತ್ಯ ನಡೆಸಿದ ನಂತರ ನೇರವಾಗಿ ಬೆಂಗಳೂರಿಗೆ ಹೋಗಿ ಅಲ್ಲಿಂದ ಒರಿಸ್ಸಾ, ಅಸ್ಸಾಂ ನಾಗಲ್ಯಾಂಡ್, ಮುಂತಾದ ಕಡೆ ತಲೆಮರೆಸಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೋಲಿಸರ ತಂಡ ಓರಿಸ್ಸಾ, ಅಸ್ಸಾಂ ನಾಗಾಲ್ಯಾಂಡ್ ಮುಂತಾದ ಕಡೆ ಆರೋಪಿಗಳ ಪತ್ತೆಗೆ ತೆರಳಿ ಖಚಿ ಮಾಹಿತಿಯಂತೆ ಸಿಸಿಬಿ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love