ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರಾಷ್ಟ್ರೀಯ ಸೇವಾ ಭಾರತಿ ಕಾರ್ಯಾಗಾರ

Spread the love

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರಾಷ್ಟ್ರೀಯ ಸೇವಾ ಭಾರತಿ ಕಾರ್ಯಾಗಾರ

ಧರ್ಮಸ್ಥಳ : “ಗ್ರಾಮೀಣ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ಗ್ರಾಮಾಭಿವೃಧ್ಧಿ ಯೋಜನೆಯು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇದರಿಂದಾಗಿಸರ್ವಾಂಗೀಣ ಗ್ರಾಮೀಣಾಭಿವೃಧ್ಧಿ ಜೊತೆಗೆ ಜನತೆಗೆ ತಮ್ಮ ಸುಂದರ ಸುಸ್ಥಿರ ಬದುಕನ್ನು ಕಟ್ಟಿಕೊಳ್ಳಲು ಆಗುತ್ತಿದೆ ” ಎಂಬುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ “ವೈಭವ ಶ್ರೀ ಕಾರ್ಯಶಾಲಾ”ಎಂಬ ಕಾರ್ಯಕ್ರಮದಡಿಯಲ್ಲಿ, ರಾಷ್ಟ್ರೀಯ ಸೇವಾ ಭಾರತಿ ಸಂಸ್ಥೆ, ನವದೆಹಲಿ ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಿದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಚತುರ್ದಾನ ಪರಂಪರೆ ಹಾಗೂ ಕ್ಷೇತ್ರದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಪ್ರಾರಂಭಿಸಿದ ರುಡ್‍ಸೆಟ್ ಸಂಸ್ಥೆಯು ಸ್ವ-ಉದ್ಯೋಗ ತರಬೇತಿಗಳನ್ನು ನೀಡುವ ಮೂಲಕ ಲಕ್ಷಾಂತರ ನಿರುದ್ಯೋಗಿಗಳ ಪಾಲಿಗೆ ವರವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಭಾರತಿ ಸಂಸ್ಥೆಯ ರಾಷ್ಟ್ರೀಯಪ್ರಧಾನ ಸಂಘಟನಾ ಕಾರ್ಯದರ್ಶಿ ಶ್ರೀ ಗುರುಶರಣ್ ಪ್ರಸಾದ್,ರಾಷ್ಟ್ರೀಯಜಂಟಿ ಸಂಘಟನಾ ಕಾರ್ಯದರ್ಶಿಶ್ರೀ ರಾಕೇಶ್ ಜೈನ್, ರಾಷ್ಟ್ರೀಯ ಸಂಯೋಜಕರಾದ ಶ್ರೀ ಸುಂದರ್ ಲಕ್ಷ್ಮಣ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಣಕಾಸು ನಿರ್ದೇಶಕರಾದ ಶ್ರೀ ಶಾಂತಾರಾಮ್ ಪೈ ಉಪಸ್ಥಿತರಿದ್ದರು.
ಜನತೆಯ ಜೊತೆಗೆ ಕೆಲಸ ಮಾಡುವಾಗ ಅವರ ಕಷ್ಠ ಸುಖಗಳಿಗೆ ಸ್ಪಂದಿಸಿ, ಸಮಸ್ಯೆಗಳನ್ನು ಬಗೆಹರಿಸಿದಾಗ ಮಾತ್ರ ನಾವು ಯಶಗಳಿಸಲು ಸಾಧ್ಯ. ಹಾಗೂ ಜನತೆಗೆ ಅಭಿವೃಧ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುವ ಸಂದರ್ಭ ಅವರ ಸುಸ್ಥಿರತೆಯ ಜೊತೆಗೆ ಕಾರ್ಯಕ್ರಮವು ಸುಸ್ಥಿರವಾದಲ್ಲಿ ಹೆಚ್ಚೆಚ್ಚು ಜನರನ್ನು ನಾವು ತಲುಪಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಎಲ್.ಎಚ್.ಮಂಜುನಾಥ್ ವಿಶೇಷ ಮಾಹಿತಿ ನೀಡಿದರು ಹಾಗೂ ಸ್ವ ಸಹಾಯ ಸಂಘಗಳ ಸಬಲೀಕರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಈ ಕಾರ್ಯಗಾರವನ್ನು ನಡೆಸಲಾಗಿದ್ದು, ವಿವಿಧ ರಾಜ್ಯಗಳ ಸುಮಾರು 35ರಾಷ್ಟ್ರೀಯ ಪ್ರಮುಖರು ಈ ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಕಾರ್ಯಕ್ರಮದಲ್ಲಿ ಯೋಜನೆಯ ಸಾಮಾಜಿಕ, ಆರ್ಥಿಕಹಾಗೂ ಅಭಿವೃಧ್ಧಿ ಕಾರ್ಯಕ್ರಮಗಳು, ಸ್ವ-ಸಹಾಯ ಸಂಘಗಳು, ಪ್ರಗತಿ ಬಂಧು ತಂಡಗಳ ಮಾದರಿ, ಸಿರಿ ಗ್ರಾಮೋದ್ಯೋಗ ಸಂಸ್ಥೆಯನ್ನುಅಧ್ಯಯನ ಮಾಡಿದರು. ವೈಭವ ಶ್ರೀ ಎಂಬ ಸ್ವ ಸಹಾಯ ಸಂಘಗಳ ರಚನೆಯನ್ನು ಈ ಸಂಸ್ಥೆಯು ಮಾಡುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಮಾದರಿಯಲ್ಲಿ ಅನುಷ್ಠಾನ ಮಾಡುವುದಾಗಿ ಅಭಿಪ್ರಾಯಪಟ್ಟಿರುತ್ತಾರೆ.


Spread the love