ಸರ್ವಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಕರೆ

Spread the love

ಸರ್ವಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಕರೆ

ಉಡುಪಿ: ಮಾರ್ಚ್ 17ರಂದು ಕಲ್ಸಂಕ ರಾಯಲ್ ಗಾರ್ಡನ್ನಲ್ಲಿ ಪ್ರಜಾಪ್ರಭುತ್ವದ ಉಳಿವಿಗಾಗಿ ಸಾಮರಸ್ಯ ಹಾಗೂ ಶಾಂತಿ ಸೌಹಾರ್ದತೆಯನ್ನು ಕಾಪಾಡಲು ‘ಸಹಬಾಳ್ವೆ ಉಡುಪಿ ಸಂಸ್ಥೆ’ ಉಡುಪಿ ಇವರು ಆಯೋಜಿಸಿರುವ ಸರ್ವಜನೋತ್ಸವ ಕಾರ್ಯಕ್ರಮಕ್ಕೆ ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ವಿನಂತಿಸಿಕೊಂಡರು.

ಬ್ರಹ್ಮಗರಿ ಕಾಂಗ್ರೆಸ್ ಭವನದಲ್ಲಿ ಮಾರ್ಚ್ 10 ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ ಪರಿವರ್ತನಾ ಯಾತ್ರೆಯ ಯಶಸ್ವಿಗೆ ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಹಾಗೂ ವಿವಿಧ ಘಟಕಗಳ ಅಧ್ಯಕ್ಷರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸಭೆಯಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಮಾತನಾಡುತ್ತಾ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಸದೃಡವಾಗಿದೆ ಎಂಬುದಕ್ಕೆ ಈ ಪರಿವರ್ತನಾ ಯಾತ್ರೆಯ ಯಶಸ್ವಿಯೇ ನಿದರ್ಶನ. ರಾಜ್ಯ ಕಾಂಗ್ರೆಸ್ ಮುಖಂಡರ ಉಪಸ್ಥಿತಿಯೊಂದಿಗೆ ಕೇಂದ್ರ ಸರಕಾರದ ವೈಫಲ್ಯ ಹಾಗೂ ಮೋದಿಯವರ ಸುಳ್ಳು ಭರವಸೆಗಳನ್ನು ಜನತೆಗೆ ತಿಳಿಯಪಡಿಸುವುದರಲ್ಲಿ ಈ ಪರಿವರ್ತನಾ ಯಾತ್ರೆ ಸಫಲತೆ ಹೊಂದಿದೆ ಎಂದರು. ಅದೇ ರೀತಿಯ ಸರ್ವಜನೋತ್ಸವದ ಯಶಸ್ಸಿಗೆ ಸರ್ವರೂ ಸಹಕರಿಸುವಂತೆ ವಿನಂತಿಸಿದರು.

ಸಭೆಯಲ್ಲಿ ಪಕ್ಷದ ಮುಖಂಡರಾದ ಕೃಷ್ಣರಾಜ್ ಸರಳಾಯ, ಹಿರಿಯಣ್ಣ, ಗೀತಾ ವಾಗ್ಳೆ, ಸರಸು ಡಿ. ಬಂಗೇರ, ಬಿ. ನರಸಿಂಹ ಮೂರ್ತಿ, ವಿಶ್ವಾಸ್ ಅಮಿನ್, ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಶೆಟ್ಟಿ, ಹಬೀಬ್ ಅಲಿ, ಶಬ್ಬೀರ್ ಅಹ್ಮದ್, ಇಸ್ಮಾಯಿಲ್ ಆತ್ರಾಡಿ, ಸತೀಶ್ ಪೂಜಾರಿ, ಸತೀಶ್ ಅಮೀನ್ ಪಡುಕೆರೆ, ನಿತ್ಯಾನಂದ ಶೆಟ್ಟಿ, ನವೀನ್ಚಂದ್ರ ಸುವರ್ಣ, ಪ್ರವೀಣ್ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಜನಾರ್ದನ ಭಂಡಾರ್ಕಾರ್, ಶಶಿಧರ ಶೆಟ್ಟಿ ಎಲ್ಲೂರು, ಸುನಿಲ್ ಬಂಗೇರ, ನಾರಾಯನ್ ಕುಂದರ್, ಗಣೇಶ್ ನೆರ್ಗಿ, ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಹರೀಶ್ ಕಿಣಿ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.


Spread the love