ಸಾಮಾಜಿಕ ಜಾಲತಾಣದಲ್ಲಿ ಅನಂತಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು

Spread the love

ಸಾಮಾಜಿಕ ಜಾಲತಾಣದಲ್ಲಿ ಅನಂತಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು

ಮಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನದಲ್ಲೂ ಕೆಲವರು ವಿಕೃತಿ ಮೆರೆದಿದ್ದಾರೆ. ಫೇಸ್ಬುಕ್ ಪೇಜ್ನಲ್ಲಿ ಅನಂತಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟರ್ ಹಾಕಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

Mangalore Muslims ಎಂಬ ಫೇಸ್ಬುಕ್ ಪೇಜ್ನಲ್ಲಿ ಅನಂತಕುಮಾರ್ ಅವರ ಫೋಟೋ ಹಾಕಿ ಅವಮಾನಕರ ಹೇಳಿಕೆ ಪ್ರಕಟಿಸಿದ್ದಾರೆ.

ಈ ಪೋಸ್ಟ್ ನೋಡಿದವರು ಪೇಜ್ ಅಡ್ಮಿನ್ಗೆ ಹಿಗ್ಗಾಮುಗ್ಗಾ ಟೀಕಿಸಿದ್ದು, ಅಲ್ಲದೆ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತಿದ್ದಾರೆ. ಅಲ್ಲದೆ, ಸಾವಿನಲ್ಲಿ ಇಂಥ ವಿಕೃತ ಮೆರೆಯುವವರು ನಿಜವಾದ ಮುಸ್ಲಿಮರೇ ಅಲ್ಲ, ಅನಂತಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಸ್ಲಿಮರೇ ಕಾಮೆಂಟ್ ಮಾಡಿದ್ದಾರೆ.
ಹಲವರ ಒತ್ತಾಯದ ಬಳಿಕ ಪೇಜ್ ವಿರುದ್ಧ ಪಾಂಡೇಶ್ವರ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.


Spread the love