ಸಾಮಾಜಿಕ ಜಾಲತಾಣದಲ್ಲಿ ಸಿಎಂಗೆ ನಿಂದನೆ: ಆರೋಪಿ ಬಂಧನ

Spread the love

ಸಾಮಾಜಿಕ ಜಾಲತಾಣದಲ್ಲಿ ಸಿಎಂಗೆ ನಿಂದನೆ: ಆರೋಪಿ ಬಂಧನ

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಇನ್‌ಸ್ಟಾಗ್ರಾಮ್ ಮೂಲಕ ಅವಾಚ್ಯವಾಗಿ ನಿಂದಿಸಿದ ಆರೋಪದ ಮೇಲೆ ಓರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಮೇರಮಜಲು ನಿವಾಸಿ ಪ್ರಶಾಂತ್ ಪೂಜಾರಿ (24) ಬಂಧಿತ ಆರೋಪಿ.

ಈತ ಮುಖ್ಯಮಂತ್ರಿಯನ್ನು ಅವಾಚ್ಯ ಶಬ್ದಗಳಿಂದ ಇನ್‌ಸ್ಟಾಗ್ರಾಮ್ ಮೂಲಕ ನಿಂದಿಸಿದ್ದ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಕದ್ರಿ ಪೊಲೀಸರು ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ.


Spread the love