ಸಾಮಾಜಿಕ ಜಾಲತಾಣದಲ್ಲಿ ಸೌದಿ ರಾಜಕುಮಾರ, ಮಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ – ಕುಂದಾಪುರದ ವ್ಯಕ್ತಿಯ ಬಂಧನ

Spread the love

ಸಾಮಾಜಿಕ ಜಾಲತಾಣದಲ್ಲಿ ಸೌದಿ ರಾಜಕುಮಾರ, ಮಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ – ಕುಂದಾಪುರದ ವ್ಯಕ್ತಿಯ ಬಂಧನ

ದಮ್ಮಾಮ್: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸೌದಿ ರಾಜಕುಮಾರ, ಮುಸ್ಲಿಮರ ಪವಿತ್ರ ಸ್ಥಳ ಮಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಲ್ಲಿ ದಮ್ಮಾಮ್ ನಲ್ಲಿ ಉದ್ಯೋಗದಲ್ಲಿದ್ದ ಕುಂದಾಪುರದ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದಮ್ಮಾಮ್ ನ ಕಂಪೆನಿಯೊಂದರಲ್ಲಿ ಹರೀಶ್ ಬಂಗೇರ ಎಂಬವರು ಉದ್ಯೋಗದಲ್ಲಿದ್ದು, ಇತ್ತೀಚೆಗಷ್ಟೇ ಅವರು ಅವಹೇಳನಕಾರಿ ಪೋಸ್ಟ್ ಗಳನ್ನು ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ಪೋಸ್ಟ್ ನ ಸ್ಕ್ರೀನ್ ಶಾಟ್ ಗಳು ವೈರಲ್ ಆದ ನಂತರ ಹರೀಶ್ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಕ್ಷಮೆ ಯಾಚಿಸಿದ್ದರು. ಆದರೆ ಇದೀಗ ಅವರ ಬಂಧನವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಅವರನ್ನು ಕರೆದೊಯ್ಯುತ್ತಿರುವ ಫೋಟೊಗಳು ವಾಟ್ಸ್ಯಾಪ್ ನಲ್ಲಿ ವೈರಲ್ ಆಗಿದೆ.

ಇಷ್ಟೇ ಅಲ್ಲದೆ ಹರೀಶ್ ರನ್ನು ಉದ್ಯೋಗದಿಂದ ಕಂಪೆನಿಯು ತೆಗೆದುಹಾಕಿದೆ ಎನ್ನಲಾಗುತ್ತಿದೆ.


Spread the love