ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಶೀಘ್ರ ನಿರ್ಧಾರ – ಸಚಿವ ಕೋಟ ಶ್ರೀನಿವಾಸ ಪೂಜಾರಿ

Spread the love

ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಶೀಘ್ರ ನಿರ್ಧಾರ – ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಯಾವುದೇ ಯಾವುದೇ ಸಾರ್ವಜನಿಕ ಸಮಾರಂಭಗಳಿಗೆ ಅವಕಾಶಗಳನ್ನು ಕಲ್ಪಿಸಿಲ್ಲ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಬಗ್ಗೆ ಹಲವರಿಂದ ಬೇಡಿಕೆಗಳು ಬಂದಿದ್ದು, ಈ ಬಗ್ಗೆ ಚಿರ್ಚಿಸಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಶುಕ್ರವಾರ ಕುಂದಾಪುರದ ಮಿನಿವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಪರಂಪರೆಯಿಂದ ಮಾಡಿಕೊಂಡು ಬಂದಿರುವ ಗಣೇಶೋತ್ಸವವನ್ನು ಕೆಲ ನಿಯಮಗಳನ್ನು ವಿಧಿಸಿ ಕನಿಷ್ಟ ಪೂಜೆಗಾದರೂ ಮಾತ್ರ ಸೀಮಿತಗೊಳಿಸಿ ಅವಕಾಶ ಕೊಡಬೇಕು ಎಂದು ಹಲವರು ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಹಾಗೂ ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಅಧಿಕೃತವಾಗಿ ಸರ್ಕಾರದಿಂದ ಸೂಚನೆಯನ್ನು ಹೊರಡಿಸುತ್ತೇವೆ ಎಂದು ಕೋಟ ಪ್ರತಿಕ್ರಿಯಿಸಿದ್ದಾರೆ.


Spread the love