ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಾಹುಲ್‌ ಗಾಂಧಿ

Spread the love

ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಾಹುಲ್‌ ಗಾಂಧಿ

ತುಮಕೂರು: ಇತ್ತೀಚೆಗಷ್ಟೇ 111ನೇ ಜನ್ಮದಿನ ಆಚರಿಸಿಕೊಂಡ ತುಮಕೂರು ಸಿದ್ದಗಂಗಾ ಶ್ರೀಗಳನ್ನು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಚುನಾವಣೆ ಪ್ರಚಾರ ಕೈಗೊಂಡಿರುವ ರಾಹುಲ್‌ ಗಾಂಧಿ ಬುಧವಾರ ಸಂಜೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.

ಸಂಜೆ ವೇಳೆಗೆ ಸಿದ್ದಗಂಗಾ ಮಠಕ್ಕೆ ಕಾರಿನಲ್ಲಿಯೇ ರಾಹುಲ್ ಗಾಂಧಿ ಆಗಮಿಸಿದರು.

ರಾಹುಲ್‌ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌, ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರರು ಹಾಜರಿದ್ದರು.


Spread the love