ಸುಳ್ಯ: ಕಾರು – ಲಾರಿ ನಡುವೆ ಮುಖಾಮುಖಿ ಢಿಕ್ಕಿ; ನಾಲ್ವರು ಮೃತ್ಯು

Spread the love

ಸುಳ್ಯ: ಕಾರು – ಲಾರಿ ನಡುವೆ ಮುಖಾಮುಖಿ ಢಿಕ್ಕಿ; ನಾಲ್ವರು ಮೃತ್ಯು

ಸುಳ್ಯ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಸ್ವಿಫ್ಟ್ ಕಾರು ಹಾಗೂ ಈಚರ್ ಲಾರಿ ನಡುವೆ ಸುಳ್ಯ ಸಮೀಪದ ಅಡ್ಕಾರ್ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಕೊಡಗಿನ ನಾಪೋಕ್ಲು ಸಮೀಪದ ಕೊಟ್ಟಮುಡಿ ನಿವಾಸಿ ಹಸೈನಾರ್ (80), ಅವರ ಪುತ್ರರಾದ ಇಬ್ರಾಹಿಂ, ಅಬ್ದುಲ್ ರಹಿಮಾನ್, ಹ್ಯಾರಿಸ್ ಮೃತರು. ಇನ್ನೋರ್ವ ಪುತ್ರ ಉಮರ್ ಫಾರೂಕ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಮಂಗಳೂರು-ಮಡಿಕೇರಿ ರಸ್ತೆಯ ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ಪುತ್ತೂರು ಕಡೆಯಿಂದ ಮಡಿಕೇರಿಯತ್ತ ತೆರಳುತ್ತಿದ್ದ ಕಾರು ಮತ್ತು ಪುತ್ತೂರಿನತ್ತ ತೆರಳುತ್ತಿದ್ದ ಈಚರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆ ಹಾದಿಯಲ್ಲಿ ಕೊನೆಯುಸಿರೆಳೆದರು.

ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love