ಸುಳ್ಯ| ಕೆಎಸ್ಸಾರ್ಟಿಸಿ ಬಸ್ಗಳ ನಡುವೆ ಅಪಘಾತ: ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು
ಸುಳ್ಯ: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಬಳಿ ಕೆಎಸ್ಸಾರ್ಟಿಸಿ ಬಸ್ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.
ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಹಾಗೂ ಮಡಿಕೇರಿಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಗಳ ನಡುವೆ ಸುಳ್ಯ ತಾಲೂಕಿನ ಅರಂತೋಡು ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಮಂಗಳೂರಿಗೆ ಚಿಕಿತ್ಸೆಗೆ ತೆರಳಿ ಮಡಿಕೇರಿಗೆ ಹಿಂತಿರುಗುತ್ತಿದ್ದ ಕುಶಾಲನಗರ ನಿವಾಸಿ ಭಾರತಿ (50) ಎಂಬವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ .
2 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುತ್ತದೆ. ಪ್ರಯಾಣಿಕರ ಪೈಕಿ 17 ಜನರಿಗೆ ಸಾಮಾನ್ಯ ಗಾಯಗಳಾಗಿದ್ದು, ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿರುತ್ತದೆ. ಘಟನಾ ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕರು ಹಾಗೂ ಉಪನಿರೀಕ್ಷಕರು ಭೇಟಿ ನೀಡಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು. ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿರುತ್ತದೆ.