ಸುವರ್ಣ ತ್ರಿಭುಜ ಬೋಟ್ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಸಹಕರಿಸಿದ ಕೇಂದ್ರ ಸರಕಾರಕ್ಕೆ ಧನ್ಯವಾದ : ಯಶ್ ಪಾಲ್ ಸುವರ್ಣ

Spread the love

ಸುವರ್ಣ ತ್ರಿಭುಜ ಬೋಟ್ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಸಹಕರಿಸಿದ ಕೇಂದ್ರ ಸರಕಾರಕ್ಕೆ ಧನ್ಯವಾದ : ಯಶ್ ಪಾಲ್ ಸುವರ್ಣ

ಉಡುಪಿ : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣತ್ರಿಭುಜ ಬೋಟ್ ಪತ್ತೆ ಹಚ್ಚಲು ವಿಶೇಷ ಕ್ರಮಕೈಗೊಳ್ಳುವಂತೆ ಮೀನುಗಾರರ ಮನವಿಗೆ ಸ್ಪಂದಿಸಿ ವಿಶೇಷ ಕಾರ್ಯಾಚರಣೆ ನಡೆಸಿ ಬೋಟಿನ ಅವಶೇಷ ಪತ್ತೆ ಹಚ್ಚುವ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರಾದ ನಿರ್ಮಲ ಸೀತರಾಮನ್ ಹಾಗೂ ನೌಕಾಪಡೆಯ ಅಧಿಕಾರಿಗಳಿಗೆ ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

ಕಳೆದ ಸುಮಾರು 140 ದಿನಗಳಿಂದ ನಾಪತ್ತೆಯಾಗಿದ್ದ ಬೋಟ್ ಪತ್ತೆಗಾಗಿ ನಿರಂತರವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಪ್ರಕರಣದ ಗಂಭೀರತೆಯ ಅರಿವು ಮೂಡಿಸಿದ ಕರಾವಳಿ ಜಿಲ್ಲೆಯ ಎಲ್ಲಾ ಸಂಸದರು ಹಾಗೂ ಶಾಸಕರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಹಾಗೂ ನಾಪತ್ತೆಯಾಗಿರುವ ಎಲ್ಲಾ 7 ಮಂದಿ ಮೀನುಗಾರರ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ವಿಶೇಷ ಪ್ರಕರಣವಾಗಿ ಪರಿಗಣಿಸಿ ಗರಿಷ್ಟ ಮೊತ್ತದ ಪರಿಹಾರ ನೀಡುವಂತೆ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.


Spread the love