Home Mangalorean News Kannada News ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ

ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ

Spread the love

ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ

ಉಡುಪಿ: ಆಗಸ್ಟ್ 15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವವನ್ನು ಬೀಡಿನಗುಡ್ಡೆ ಬಯಲು ರಂಗಮಂದಿರದಲ್ಲಿ ಆಚರಿಸಲು ಜಿಲ್ಲಾಧಿಕಾರಿ (ಪ್ರಭಾರ) ಗಳ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಪ್ರತೀ ವರ್ಷದಂತೆ ಈ ಸಾಲಿನಲ್ಲಿಯೂ ಸುವ್ಯವಸ್ಥಿತವಾಗಿ ಕಾರ್ಯಕ್ರಮ ಏರ್ಪಡಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಯಿತು. ಪ್ರತಿಯೊಂದು ಸಮಿತಿಗೂ ನಿಗದಿತ ಹೊಣೆ ವಹಿಸಲಾಯಿತು.
ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ ರಾವ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love

Exit mobile version