ಹಕ್ಕುಪತ್ರ ವಿತರಿಸಲು ಕೂಡಲೇ ಕ್ರಮ ತೆಗೆದುಕೊಳ್ಳಿ: ಕೋಟ ಶ್ರೀನಿವಾಸ ಪೂಜಾರಿ

Spread the love

ಹಕ್ಕುಪತ್ರ ವಿತರಿಸಲು ಕೂಡಲೇ ಕ್ರಮ ತೆಗೆದುಕೊಳ್ಳಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲ್ಲೂಕು, ಕೋಡಿ ಕನ್ಯಾಣ ಗ್ರಾಮದ ಹಕ್ಕುಪತ್ರದ ವಿತರಣೆಯಲ್ಲಿ ಆಗಿರುವ ಲೋಪದೋಷದ ಕುರಿತು ಚರ್ಚಿಸಲು ಮುಜರಾಯಿ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹಕ್ಕು ಪತ್ರ ವಿತರಿಸಲು ಕೂಡಲೇ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದರು.

ಸಭೆಯಲ್ಲಿ ಇಲಾಖೆಗಳೊಂದಿಗಿನ ಸಮನ್ವಯ ಕೊರತೆಯಿಂದ ಹಕ್ಕುಪತ್ರ ವಿತರಣೆಯಲ್ಲಿ ಆಗುತ್ತಿರುವ ವಿಚಾರವನ್ನು ಸಭೆಯಲ್ಲಿ ಸಚಿವರು ತಿಳಿಸಿದರು. ಈ ಬಗ್ಗೆ 5 ದಿನಗಳೊಳಗೆ ಸಂಬAಧಪಟ್ಟ ಅಧಿಕಾರಿಗಳ ಸಭೆಯನ್ನು ನಡೆಸಿ ಹಕ್ಕು ಪತ್ರ ನೀಡಲು ಕೂಡಲೇ ಕ್ರಮ ವಹಿಸಬೇಕೆಂದು ಸೂಚಿಸಿದರು. ಸಭೆಯಲ್ಲಿ ಬ್ರಹ್ಮಾವರ ತಹಶೀಲ್ದಾರರಾದ ಕಿರಣ್ಗೋರಯ್ಯ, ಸವಿತಾಖಾದ್ರಿ, ಪ್ರಾದೇಶಿಕ ನಿರ್ದೇಶಕ, ಕರಾವಳಿ ನಿಯಂತ್ರಣ ವಲಯ ಉಡುಪಿ, ಕಂದಾಯ ನಿರೀಕ್ಷಕ ರಾಜೀವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬೆನ್ನಿಕ್ವಾಡ್ರಸ್ ಉಪಸ್ಥಿತರಿದ್ದರು.


Spread the love