Home Mangalorean News Kannada News ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವಾರ್ಷಿಕ ಸ್ನೇಹ ಕೂಟ

ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವಾರ್ಷಿಕ ಸ್ನೇಹ ಕೂಟ

Spread the love

ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವಾರ್ಷಿಕ ಸ್ನೇಹ ಕೂಟ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಬಂಟರ ಸಂಘ (ರಿ.) ವತಿಯಿಂದ ಹುಬ್ಬಳ್ಳಿಯಲ್ಲಿ ನಡೆದ ವಾರ್ಷಿಕ ಸ್ನೇಹ ಕೂಟ ಸಮಾರಂಭ ಕಾರ್ಯಕ್ರಮದಲ್ಲಿ ಶಾಸಕರಾದ ಕೆ ರಘುಪತಿ ಭಟ್ ಅವರು ಭಾಗವಹಿಸಿದ್ದರು.

ಇದೇ ವೇಳೆ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರನ್ನು ಸಂಘಟನೆಯ ವತಿಯಿಂದ ಸನ್ಮಾನಿಸಲಾಯಿತು.
ಸಮಾಜವನ್ನು ಕಟ್ಟುವಲ್ಲಿ ಬಂಟರ ಸಂಘಟನೆಯು ಉತ್ತಮ ಕೆಲಸವನ್ನು ಮಾಡುತ್ತಿದೆ. ಸೇವಾ ಕಾರ್ಯಗಳು ಸೇರಿದಂತೆ ಬಡವರ ಬಗ್ಗೆ ವಿಶೇಷ ಕಾಳಜಿಯನ್ನು ಈ ಸಮುದಾಯದ ಸಂಘಟನೆಗಳು ನಡೆಸುತ್ತಿವೆ. ರಾಷ್ಟ್ರ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲೂ ಬಂಟರ ಹೆಸರು ಮಿಂಚುತ್ತಿದ್ದು ಈ ಸಮುದಾಯದ ಸಾಧನಾ ಶೀಲತೆಯನ್ನು ಬಿಂಬಿಸುತ್ತದೆ ಎಂದು ಶಾಸಕರು ಹೇಳಿದರು.

ಸುಗ್ಗಿ ಸುಧಾಕರ್ ಶೆಟ್ಟಿ ಈ ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿ. ಬಾಲಕೃಷ್ಣ ಶೆಟ್ಟಿ ರಾಯಭಾರಿಗಳು(ನಿವೃತ್ತ) ಭಾರತ ಸರಕಾರ, ಡೆಪ್ಯೂಟಿ ರಿಜಿಸ್ಟ್ರಾರ್, ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ಇದರ ಡಾ.ಬಿ. ವಸಂತ್ ಶೆಟ್ಟಿ, ಗೌರವಾಧ್ಯಕ್ಷರಾದ ಆರ್.ಎನ್. ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು


Spread the love

Exit mobile version