ಹೆಚ್ಚುವರಿ ಭದ್ರತೆ ಕೋರಿ ಗೃಹ ಇಲಾಖೆಗೆ ಸಚಿವ ಪ್ರಮೋದ್ ಮಧ್ವರಾಜ್ ಪತ್ರ

Spread the love

ಹೆಚ್ಚುವರಿ ಭದ್ರತೆ ಕೋರಿ ಗೃಹ ಇಲಾಖೆಗೆ ಸಚಿವ ಪ್ರಮೋದ್ ಮಧ್ವರಾಜ್ ಪತ್ರ

ಉಡುಪಿ: ಚುನಾವಣೆ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಹೆಚ್ಚುವರಿ ಭದ್ರತೆ ಕೋರಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.

ತನಗೆ ಹೆಚ್ಚುವರಿ ಭದ್ರತೆಯನ್ನು ನೀಡುವಂತೆ ಸಚಿವ ಪ್ರಮೋದ್ ಮಧ್ವರಾಜ್ ಗೃಹ ಮಂತ್ರಿ ರಾಮಲಿಂಗಾ ರೆಡ್ಡಿ ಮತ್ತು ಗೃಹ ಇಲಾಖೆಗೆ ಪತ್ರ ಬರೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಮಂತ್ರಿಗಳು ಪತ್ರವನ್ನು ಗೃಹ ಇಲಾಖೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಯಾವುದೇ ಅನಾಹುತ ಆಗದಿರಲಿ ಎಂದು ಹೆಚ್ಚುವರಿ ಭದ್ರತೆ ಕೋರಿದ್ದೇನೆ.  ಚುನಾವಣಾ ಪ್ರಚಾರ ಕಾರ್ಯದಲ್ಲಿರುವಾಗ ಅವಘಡ ಆಗದಿರಲಿ ಎಂದು ಮುನ್ನಚ್ಚೆರಿಕೆ ದೃಷ್ಟಿಯಿಂದ ಪತ್ರ ಬರೆದಿದ್ದೇನೆ.

ಪತ್ರ ಕಳುಹಿಸಿದ ಬಳಿಕ ಏನು ಬೆಳವಣಿಗೆಯಾಗಿದೆ ಎಂದು ಗೊತ್ತಿಲ್ಲ. ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಯಾವ ರೀತಿಯ ಭದ್ರತೆ ಕೊಡುತ್ತಾರೆ ಎನ್ನುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಪತ್ರದಲ್ಲಿ ಭದ್ರತೆಗೆ ಯಾವುದೇ ಕಾರಣ ಕೊಟ್ಟಿಲ್ಲ ಎಂದರು.


Spread the love