Home Mangalorean News Kannada News ಹೆಬ್ರಿ: ಭಾರೀ ಗಾಳಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸಾವು

ಹೆಬ್ರಿ: ಭಾರೀ ಗಾಳಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸಾವು

Spread the love

ಹೆಬ್ರಿ: ಭಾರೀ ಗಾಳಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸಾವು

ಕಾರ್ಕಳ: ಭಾರೀ ಗಾಳಿ ಮಳೆಯ ಬರುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಸಾವನಪ್ಪಿದ ಘಟನೆ ಹೆಬ್ರಿ ಸಮೀಪದ ಬೆಳಂಜೆ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಪ್ರಸಾದ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಬುಧವಾರ ಸಂಜೆ ಕಾರ್ಕಳ ಹೆಬ್ರಿ ಭಾಗಗಳಲ್ಲಿ ಗುಡುಗು, ಸಿಡಿಲು ಗಾಳಿ ಸಹಿತ ಭಾರಿ ಮಳೆಯಾಗಿದ್ದು ಈ ವೇಳೆ ಪ್ರಸಾದ್ ಶೆಟ್ಟಿ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಮರವೊಂದು ಗಾಳಿಗೆ ಪ್ರಸಾದ್ ಶೆಟ್ಟಿ ಮೇಲೆ ಉರುಳಿ ಬಿದ್ದಿದ್ದು ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ

ಬುಧವಾರ ಸಂಜೆಯಿಂದ ಕಾರ್ಕಳ ಹೆಬ್ರಿ ಪರಿಸರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಗಾಳಿ-ಮಳೆಗೆ ಕಾರ್ಕಳದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.


Spread the love

Exit mobile version