Home Mangalorean News Kannada News ಮಂಗಳೂರು: ಪವಿತ್ರ ತುಳು ಸಿನಿಮಾ ಜನವರಿಯಲ್ಲಿ ತೆರೆಗೆ

ಮಂಗಳೂರು: ಪವಿತ್ರ ತುಳು ಸಿನಿಮಾ ಜನವರಿಯಲ್ಲಿ ತೆರೆಗೆ

Spread the love

ಮಂಗಳೂರು: ಶ್ರೀ ಇಂದಿರಾ ಮೂವೀಸ್ ಲಾಂಛನದಲ್ಲಿ ತಯಾರಾದ ಪವಿತ್ರ (ಬೀಡಿದ ಪೊಣ್ಣು) ತುಳು ಚಲನಚಿತ್ರವು ಜನವರಿ ತಿಂಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಚೆನ್ನೈನಲ್ಲಿ ನೆಲೆಸಿರುವ ಮೂಲತಃ ಎರ್ಮಾಳ್ ನವರಾದ ಅನಂತರಾಮರಾವ್ ಎರ್ಮಾಳ್ ನಿರ್ಮಾಣದ ನಾಗವೆಂಕಟೇಶ್ ನಿರ್ದೇಶನದಲ್ಲಿ ಕನ್ನಡದಲ್ಲಿ ನೂರಾರು ಸಿನಿಮಾಗಳಲ್ಲಿ ಛಾಯಾಗ್ರಹಣ ಮಾಡಿರುವ ಜೆ.ಜಿ.ಕೃಷ್ಣ ಅವರ ಛಾಯಾಗ್ರಹಣ, ರಿಸೆಲ್ ಸಾಹಿ ಅವರ ಸಂಗೀತ, ಅಶೋಕ್‍ರಾಜ್ ಅವರ ನೃತ್ಯ ಈ ಸಿನಿಮಾಕ್ಕೆ ಇದೆ. ಸಿದ್ದರಾಜ್ ಅವರ ಸಾಹಸ ನಿರ್ದೇಶನದಲ್ಲಿ ಎರಡು ಸಾಹಸ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

ANU_4260

ಪವಿತ್ರ ಸಿನಿಮಾಕ್ಕೆ 23 ದಿನಗಳ ಕಾಲ ಒಂದೇ ಹಂತದಲ್ಲಿ ಮಂಗಳೂರು ಸುತ್ತಮುತ್ತ ಹಾಗೂ ಎರ್ಮಾಳ್ , ಕಾಪು, ಕೂಳೂರು, ಹಳೆಯಂಗಡಿ ಜಪ್ಪು ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾದಲ್ಲಿ ಐದು ಹಾಡುಗಳಿವೆ.

ಹೊಸ ನಾಯಕಿ

ಪವಿತ್ರ ಸಿನಿಮಾದ ಮೂಲಕ ಚಿರಶ್ರೀ ಅಂಚನ್ ತುಳು ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇವರು ಈಗಾಗಲೇ ತುಳುವಿನಲ್ಲಿ ರಂಬಾರೂಟಿ, ಕನ್ನಡದಲ್ಲಿ ಖ್ಯಾತ ನಟ ಉಪೇಂದ್ರ ಅವರ ಕಲ್ಪನಾ 2, ಅಲ್ಲದೆ ಉಡುಂಬಾ, ಫಕೀರ ಎಂಬ ಕನ್ನಡ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.ನಾಯಕ ನಟನಾಗಿ ಶ್ರವಂತ್ ಅಭಿನಯಿಸಿದ್ದಾರೆ. ಶ್ರವಂತ್ ಕನ್ನಡದ 3 ಸಿನಿಮಾದಲ್ಲಿ ನಟಿಸಿದ್ದಲ್ಲದೆ ಮಧುಬಾಲ, ವೈಷ್ಣವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ತುಳು ಸಿನಿಮಾರಂಗದ ದಿಗ್ಗಜರ ಸಮಾಗಮ

ಪವಿತ್ರ ಸಿನಿಮಾದಲ್ಲಿ ತುಳು ಸಿನಿಮಾರಂಗದ ದಿಗ್ಗಜರಾದ ಕುಸೇಲ್ದರಸೆ ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು ಅಭಿನಯಿಸಿದ್ದಾರೆ. ಇನ್ನುಳಿದಂತೆ ಉಮೇಶ್ ಮಿಜಾರ್, ರಂಜನ್ ಬೋಳೂರು, ರಘು ಪಾಂಡೇಶ್ವರ್, ಮನೋಜ್ ಪುತ್ತೂರು, ಶೋಭಾ ರೈ, ವಿದ್ಯಾ, ಸುಪ್ರೀತ, ದೀಪಿಕಾ, ರಂಜಿತಾ ಶೇಟ್, ರಿತೇಶ್ ಮಂಗಳೂರು, ವಸಂತ್, ತಿಮ್ಮಪ್ಪ ಕುಲಾಲ್ ಮೊದಲಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಕತೆಯನ್ನು ನಿರ್ಮಾಪಕ ಅನಂತರಾಮ್ ರಾವ್ ಎರ್ಮಾಳ್ ಒದಗಿಸಿದ್ದಾರೆ. ಚಿತ್ರಕತೆ, ನಿರ್ದೇಶನ: ನಾಗವೆಂಕಟೇಶ್, ಸಾಹಿತ್ಯ ಸಂಭಾಷಣೆ:ರಂಜಿತ್ ಸುವರ್ಣ, ಚಿದಂಬರಂ ಪ್ರೋಡಕ್ಷನ್ ಉಸ್ತುವಾರಿಯಾಗಿರುತ್ತಾರೆ. ಸತೀಶ್ ಬ್ರಹ್ಮಾವರ ಯೂನಿಟ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.


Spread the love

Exit mobile version