2019ರಲ್ಲಿ ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

Spread the love

2019ರಲ್ಲಿ ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಮಂಗಳೂರು: ನಗರದ ಉಜ್ಜೋಡಿಯ ಸುವಿಧಾ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ನವೀನ್ (32) ಎಂಬವರು 2019ರ ನವೆಂಬರ್ 19ರಂದು ಮನೆಯಿಂದ ಶಿರಡಿಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದು, ಆ ಬಳಿಕದಿಂದ ಕಾಣೆಯಾಗಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರ ವಿವರಗಳು:
ಗೋಧಿ ಮೈಬಣ್ಣ, ಸಾಧಾರಣ ಶರೀರ, ದುಂಡು ಮುಖ, ಬಲ ಕೈ ರಟ್ಟೆಯಲ್ಲಿ ಎತ್ತಿನ ತಲೆಯ ಆಕೃತಿಯ ನೀಲಿ ಬಣ್ಣದ ಟ್ಯಾಟೂ ಇರುವುದು ವಿಶೇಷ ಲಕ್ಷಣ. ಕಾಣೆಯಾದ ದಿನ ನೀಲಿ ಬಣ್ಣದ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರೆಂದು ತಿಳಿದುಬಂದಿದೆ. ತುಳು, ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಮಾತನಾಡುವವರು.

ಕಾಣೆಯಾದ ನವೀನ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಠಾಣಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments