39 ವರ್ಷಗಳಿಂದ ತಲೆ ಮರೆಸಿಕೊಂಡ ಹಳೇ ಆರೋಪಿಯ ಬಂಧನ

Spread the love

39 ವರ್ಷಗಳಿಂದ ತಲೆ ಮರೆಸಿಕೊಂಡ ಹಳೇ ಆರೋಪಿಯ ಬಂಧನ

ಮಂಗಳೂರು: ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಕರಣವೊಂರದಲ್ಲಿ ಗಣೇಶ್ ಶೆಟ್ಟಿ ಎಂಬವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಿ ನಂತರ ಸುಮಾರು 39 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿರುವ ಆರೋಪಿಯನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಆದೇಶದಂತೆ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ಆರೋಪಿಯಾದ ಅವಿಲ್ ಡಿಸೋಜ(56), ಪಡ್ಪು ಆಡಂ ಕುದ್ರು, ಜಪ್ಪಿನಮೊಗರು. ಮಂಗಳೂರು ಆಗಿದ್ದು , ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1980 ನೇ ವರ್ಷದಲ್ಲಿ ಈತನ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 39 ವರ್ಷಗಳಿಂದ ತಲೆಮರೆಸಿಕೊಂಡು ವಿದೇಶದಲ್ಲಿದ್ದು, ಆರೋಪಿಯ ಪತ್ತೆಯ ಬಗ್ಗೆ ನ್ಯಾಯಾಲಯವು ಈತನ ಮೇಲೆ ವಾರಂಟು ಹೊರಡಿಸಿಲಾಗಿತ್ತು .ಇದೀಗ ಆರೋಪಿ ಮಂಗಳೂರಿಗೆ ಬಂದು ಕುಂಪಲದಲ್ಲಿ ಮನೆ ಮಾಡಿದ ಬಗ್ಗೆ ಮಾಹಿತಿ ಪಡೆದ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ದಸ್ತಗಿರಿ ಮಾಡಿರುತ್ತಾರೆ. ಆರೋಪಿಯನ್ನು ಮುಂದಿನ ಕ್ರಮದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಲಾಗಿದೆ

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ , ಐ.ಪಿ.ಎಸ್. ರವರ ನಿರ್ದೇಶನದಂತೆ, ಹನುಮಂತರಾಯ (ಐಪಿಎಸ್‌) ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಉಮಾ ಪ್ರಶಾಂತ್, ಡಿ.ಸಿ.ಪಿ (ಅಪರಾಧ ಮತ್ತು ಸಂಚಾರ ವಿಭಾಗ) ರವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳದ ಎ.ಸಿ.ಪಿ. ಯವರು ಮತ್ತು ಸಿಬ್ಬಂದಿಯವರುಗಳು ಪತ್ತೆ ಕಾರ್ಯದಲ್ಲಿ ಬಾಗವಹಿಸಿರುತ್ತಾರೆ.


Spread the love