ಕನ್ನಡ ಅಭಿವೃದ್ಧಿ ಜಾಗೃತಿ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ನೇಮಕ

Spread the love

ಕನ್ನಡ ಅಭಿವೃದ್ಧಿ ಜಾಗೃತಿ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ನೇಮಕ

ಮಂಗಳೂರು: ಕರ್ನಾಟಕ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿಯ ಸರ್ಕಾರೇತರ ಸದಸ್ಯರನ್ನಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ.

ಸರ್ಕಾರ ಕನ್ನಡ ಜಾಗೃತಿ ಕುರಿತು ಹೊರಡಿಸುವ ಆದೇಶಗಳ ಬಗ್ಗೆ ಕಾಲ ಕಾಲಕ್ಕೆ ಸೂಕ್ತ ಸಲಹೆಗಳನ್ನು ಕೊಡಲು ಮತ್ತು ಅದು ಅನುಷ್ಠಾನವಾಗುತ್ತಿರುವ ಬಗ್ಗೆ ನೋಡಿಕೊಳ್ಳಲು ಅವಕಾಶವಿದೆ.

ಚಿದಂಬರ ಬೈಕಂಪಾಡಿ ಅವರು ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ 1987-88ರಲ್ಲಿ ಮೂರು ವರ್ಷಗಳಿಗೆ ನೇಮಕಗೊಂಡಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಅವರನ್ನು ನೇಮಕ ಮಾಡಲಾಗಿತ್ತು.

ಚಿದಂಬರ ಬೈಕಂಪಾಡಿ ಅವರಿಗೆ 2015 ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.


Spread the love