Home Mangalorean News Kannada News ಮಳೆಗಾಲದ ಸಂಧರ್ಭದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆ ಬಗ್ಗೆ ರೈತರಿಗೆ ಸಲಹೆ

ಮಳೆಗಾಲದ ಸಂಧರ್ಭದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆ ಬಗ್ಗೆ ರೈತರಿಗೆ ಸಲಹೆ

Spread the love

ಮಳೆಗಾಲದ ಸಂಧರ್ಭದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆ ಬಗ್ಗೆ ರೈತರಿಗೆ ಸಲಹೆ

ಉಡುಪಿ ಜಿಲ್ಲೆಯು ವಾರ್ಷಿಕ 4500 ಮಿ.ಮೀ. ಗಿಂತಲೂ ಹೆಚ್ಚು ಮಳೆಯಾಗುವ ಪ್ರದೇಶವಾಗಿದ್ದು, ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು ಹಾಗೂ ಕಾಳುಮೆಣಸು ಬೆಳೆಗಳು ವಿಪರೀತ ಮಳೆಯಿಂದಾಗಿ ವಿವಿಧ ರೋಗ ಬಾಧೆಗೆ ತುತ್ತಾಗುವ ಸಾಧ್ಯತೆ ಇದ್ದು, ಅಸಮರ್ಪಕ ನಿರ್ವಹಣೆಯಿಂದಾಗಿ ಇಳುವರಿ ನಷ್ಟವಾಗುವುದಲ್ಲದೆ, ರೋಗಬಾಧೆ ಉಲ್ಬಣವಾಗಿ ಮರಗಳು ಸಂಪೂರ್ಣವಾಗಿ ನಾಶವಾಗುವ ಸಾಧ್ಯತೆ ಇರುತ್ತದೆ.  ಮಳೆಗಾಲದಲ್ಲಿ ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳ ಕೊಚ್ಚಣೆ ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದಾಗಿ ಅಡಿಕೆ ಕೊಳೆ ರೋಗ, ಕಾಳುಮೆಣಸು ಸೊರಗು ರೋಗ ಹಾಗೂ ತೆಂಗಿನಲ್ಲಿ ಸುಳಿಕೊಳೆ ರೋಗ ಉಲ್ಬಣಿಸುವ ಸಾಧ್ಯತೆ ಇರುತ್ತದೆ. ಅಡಿಕೆ ಮತ್ತು ತೆಂಗಿನಲ್ಲಿ ಮಳೆಗಾಲದಲ್ಲಿ ಕೊಳೆರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳದೆ ಇದ್ದಲ್ಲಿ, ಅಕ್ಟೋಬರ್ ತಿಂಗಳಿನಿಂದ ಫೆಬ್ರವರಿವರೆವಿಗೂ ಹೆಚ್ಚಾಗುವ ಮಂಜಿನ ಹನಿಗಳು ರೋಗಾಣುಗಳು ಅಭಿವೃದ್ದಿಗೆ ಅನುಕೂಲಕರವಾಗಿದ್ದು, ಕೊಳೆ ರೋಗಕ್ಕೆ ಕಾರಣವಾದ ಶಿಲೀಂದ್ರ ರೋಗಾಣುಗಳು ಅಭಿವೃದ್ದಿ ಹೊಂದಿ ಶಿರಕೊಳೆ (Crownrot) ಮತ್ತು ಸುಳಿಕೊಳೆ (Budrot) ರೋಗಗಳಿಂದಾಗಿ ಅಡಿಕೆ/ತೆಂಗಿನ ಮರಗಳು ಸಾಯುವ ಸಂಭವ ಹೆಚ್ಚಾಗಿರುತ್ತದೆ.

ಈ ರೋಗಬಾಧೆಗಳು ಉಲ್ಬಣಿಸುವುದನ್ನು ತಡೆಗಟ್ಟಲು ಅಡಿಕೆ ಬೆಳೆಗೆ  ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಶಿಫಾರಸ್ಸು ಮಾಡಲಾಗಿದೆ.

  • ಕೆಳಗೆ ಬಿದ್ದಿರುವ ರೋಗ ಪೀಡಿತ ಕಾಯಿ ಹಾಗೂ ಒಣಗಿದ ಹಿಂಗಾರುಗಳನ್ನು ಆರಿಸಿ ತೆಗೆದು ಸುಡುವುದು ಅಥವಾ ಗುಂಡಿಗಳಲ್ಲಿ ಹಾಕಿ ಮಣ್ಣಿನಿಂದ ಮುಚ್ಚಬೇಕು.
  • ತೋಟಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಬಸಿಗಾಲುವೆ ಚೊಕ್ಕ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದು.
  • ಗಾಳಿ ಆಡುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು.
  • ರೋಗವನ್ನು ಹತೋಟಿಯಲ್ಲಿಡಲು ಜೂನ್ ಮಾಹೆಯಿಂದ ಅಗಸ್ಟ್-ಸೆಪ್ಟೆಂಬರ್ ಮಾಹೆಯವರೆಗೆ 25 ರಿಂದ 30 ದಿನದ ಅಂತರದಲ್ಲಿ ಶೇ. 1 ರ ಬೋರ್ಡೋ ದ್ರಾವಣ ಅಥವಾ ಮ್ಯಾಂಡಿಪ್ರೋಪಾಮಿಡ್ (1 ಮಿ.ಲೀ. 1 ಲೀ. ನೀರಿನಲ್ಲಿ ಮಿಶ್ರಣ ಮಾಡಿ) ಗೊನೆಗಳಿಗೆ ಹಾಗೂ ಎಲೆ ತೊಟ್ಟು, ಹೊಡೆ ಭಾಗ ಮತ್ತು ಸುಳಿ ಭಾಗಗಳು ಚೆನ್ನಾಗಿ ನೆನೆಯುವಂತೆ ಸೂಕ್ತ ಅಂಟಿನೊಂದಿಗೆ (ರಾಳ) ಸಿಂಪರಣೆ ಮಾಡಿ
  • ಮಣ್ಣು ಪರೀಕ್ಷೆ ಆಧಾರದ ಮೇಲೆ ಶಿಫಾರಸ್ಸು ಮಾಡಿದ ಸುಣ್ಣ , ಸಾವಯವ ಗೊಬ್ಬರ (ಪ್ರತಿ ಮರಕ್ಕೆ 10-12 ಕಿ.ಗ್ರಾಂ) ಮತ್ತು ರಾಸಾಯನಿಕ ಗೊಬ್ಬರಗಳನ್ನು (ಪ್ರತಿ ಮರಕ್ಕೆ) 100:40:140 ಗ್ರಾಂ ಸಾ.ರಂ.ಪೊ) ಸೆಪ್ಟೆಂಬರ್-ಅಕ್ಟೋಬರ್ ಅವಧಿಯಲ್ಲಿ ಮಣ್ಣಿಗೆ ಸೇರಿಸಬೇಕು. ಈಗಾಗಲೇ ಶಿಫಾರಸ್ಸು ಮಾಡಿದ ಶೇ.50 ರಷ್ಟು ರಸಗೊಬ್ಬರಗಳನ್ನು ಮುಂಗಾರಿನ ಮೊದಲು ಕೊಟ್ಟಿದ್ದರೆ ಈಗ ಉಳಿದ ಅರ್ಧ ಭಾಗವನ್ನು ಕೊಟ್ಟರೆ ಸಾಕಾಗುತ್ತದೆ.
  • ಇದೇ ಅವಧಿಯಲ್ಲಿ ಬೇರುಗಳ ವಲಯವನ್ನು ಶೇ. 10 ರ ಬೋರ್ಡೋ ದ್ರಾವಣ ಅಥವಾ ಶೇ. 0.3 ರ ಅಕೋಮಿನ್/ ತಾಮ್ರದ ಆಕ್ಸಿಕ್ಲೋರೈಡ್ ದ್ರಾವಣದಿಂದ ನೆನೆಸುವುದು. ಪ್ರತಿ ಮರಕ್ಕೆ ಸುಮಾರು 5 ಲೀ ದ್ರಾವಣ ಬೇಕಾಗುವುದು.
  • ತುಂತುರು ಮಳೆ ಇರುವಾಗ ಬೋರ್ಡೋ ದ್ರಾವಣವನ್ನು ಹಾಗೂ ಶುಷ್ಕ ವಾತಾವರಣ ಇದ್ದಾಗ ಬೋರ್ಡೋ ದ್ರಾವಣಕ್ಕೆ ಬದಲಿ ಶಿಲೀಂದ್ರ ನಾಶಕಗಳಾದ ಮ್ಯಾಂಡಿಪ್ರೋಪಾಮಿಡ್ (1 ಮಿ.ಲೀ. 1 ಲೀ. ನೀರಿನಲ್ಲಿ ಮಿಶ್ರಣ ಮಾಡಿ) ಅಥವಾ ಮೆಟಲಾಕ್ಸಿಲ್ ಎಂ.ಜಡ್ (2 ಗ್ರಾಂ 1 ಲೀ ನೀರಿನಲ್ಲಿ ಕರಗಿಸಿ) ಔಷಧಗಳನ್ನು ಸೂಕ್ತ ಅಂಟಿನೊಂದಿಗೆ ಸಿಂಪರಣೆಗೆ ಬಳಸಬಹುದು.
  • ಈ ಮೇಲಿನ ಕ್ರಮಗಳನ್ನು ಸಾಮೂಹಿಕವಾಗಿ ಎಲ್ಲಾ ರೈತರು ಏಕಕಾಲದಲ್ಲಿ ಅನುಸರಿಸಿದ್ದಲ್ಲಿ ಮರಗಳನ್ನು ಸುಳಿಕೊಳೆ ಅಥವಾ ಶಿರಕೊಳೆಯಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ

ಮಳೆಗಾಲದಲ್ಲಿ ಅಡಿಕೆ ಅಲ್ಲದೆ ತೆಂಗು ಬೆಳೆಗೂ ಕೊಳೆರೋಗ ಹಾಗೂ ಕಾಳುಮೆಣಸು ಬೆಳೆಗೆ ಶೀಘ್ರ ಸೊರಗು ರೋಗ ಬಾಧಿಸುವ ಸಾಧ್ಯತೆ ಇದ್ದು ಅಡಿಕೆಗೆ ಶಿಫಾರಸ್ಸು ಮಾಡಿದ ಸಿಂಪರಣೆಯನ್ನು ರೋಗ ಬಾಧಿತ ತೆಂಗಿನ ಮರಗಳಿಗೆ ಹಾಗೂ ಮುಂಜಾಗೃತ ಕ್ರಮವಾಗಿ ಕಾಳುಮೆಣಸು ಬಳ್ಳಿಗಳಿಗೂ ಸಿಂಪರಣೆ ಮಾಡುವುದರಿಂದ ರೋಗ ಬಾಧೆಯನ್ನು ನಿಯಂತ್ರಿಸಬಹುದಾಗಿದೆ.

ರೈತರ ಆರೋಗ್ಯದ ಬಗ್ಗೆ ಸಲಹೆಗಳು: ಮಳೆಗಾಲದಲ್ಲಿ ಅಡಿಕೆ, ತೆಂಗು, ರಬ್ಬರ್ ಮತ್ತು ಇತರೆ ತೋಟಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗುವ ಸಾಧ್ಯತೆ ಇದ್ದು, ಇದರಿಂದ ಡೆಂಗ್ಯೂ ಮತ್ತು ಮಲೇರಿಯಾದಂತ ಕಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ರೈತರು ಈ ಬಗ್ಗೆ ಅಗತ್ಯ ಮುಂಜಾಗೃತ ಕ್ರಮಗಳನ್ನು ಈ ಕೆಳಗಿನಂತೆ ಕೈಗೊಳ್ಳಲು ಸಹ ಸಲಹೆ ನೀಡಲಾಗಿದೆ.

  • ತೋಟಗಳಲ್ಲಿ ನೀರು ನಿಲ್ಲದಂತೆ ಸೂಕ್ತ ಬಸಿಕಾಲುವೆಗಳನ್ನು ನಿರ್ಮಾಣ ಮಾಡುವುದು ಹಾಗೂ ಬಸಿಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡುವುದು
  • ಅಡಿಕೆ ತೋಟಗಳಲ್ಲಿ ಗರಿಗಳು ಬಿದ್ದು ಗರಿಗಳಲ್ಲಿ ನೀರು ಸಂಗ್ರಹವಾಗುವ ಸಾಧ್ಯತೆ ಇದ್ದು, ಗರಿಗಳನ್ನು ಕಾಲಕಾಲಕ್ಕೆ ಸಂಗ್ರಹಿಸಿ, ವಿಲೆವಾರಿ ಮಾಡುವುದು
  • ರಬ್ಬರ್ ತೋಟಗಳಲ್ಲಿ ರಬ್ಬರ್ ಹಾಲು ಸಂಗ್ರಹಣೆ ಮಾಡಲು ಉಪಯೋಗಿಸುವ ಪರಿಕರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು/ಬಟ್ಟಲುಗಳನ್ನು ನೀರು ನಿಲ್ಲದಂತೆ ಕೆಳಗೆ ತಿರುಗಿಸುವುದು.
  • ರೈತರು/ಕೃಷಿ ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಸೊಳ್ಳೆಗಳು ಕಚ್ಚದಂತೆ ಅಗತ್ಯ ಮನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು
  • ಸಿಡಿಲು/ಗಾಳಿಯಿಂದ ಹಾನಿಯಾಗದಂತೆ ಈಗಾಗಲೆ ಜಿಲ್ಲಾಡಳಿತದಿಂದ ಹೊರಡಿಸಿದ ಮಾರ್ಗಸೂಚಿಯಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version