L K
ಎಕ್ಸ್ ಪ್ರೆಸ್ ಹೈವೇನಲ್ಲಿ ಬೈಕ್ ಅವಘಡ: ಮಹಿಳೆ ಸಾವು
ಎಕ್ಸ್ ಪ್ರೆಸ್ ಹೈವೇನಲ್ಲಿ ಬೈಕ್ ಅವಘಡ: ಮಹಿಳೆ ಸಾವು
ಮಂಡ್ಯ: ಮೈಸೂರಿನಿಂದ ಬೆಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಮೈಸೂರು...
ಮಾ. 25ರಂದು ಬೆಂಗಳೂರು ಹಬ್ಬ ಆಚರಣೆ : ಆರ್. ಅಶೋಕ್
ಮಾ. 25ರಂದು ಬೆಂಗಳೂರು ಹಬ್ಬ ಆಚರಣೆ : ಆರ್. ಅಶೋಕ್
ಬೆಂಗಳೂರು: ಕರ್ನಾಟಕ ಸಂಸ್ಕೃತಿ ಇತಿಹಾಸ ಹಾಗೂ ಪರಂಪರೆಗಳನ್ನು ಬೆಂಗಳೂರಿನಲ್ಲಿ ನೆಲೆಸಿರುವ ಭಾಷಿಕರನ್ನು ಒಳಗೊಂಡಂತೆ ನಾಡಿನ ಜನರಿಗೆ ಪರಿಚಯಿಸುವ ದೃಷ್ಟಿಯಿಂದ ಮಾ.25ರಂದು ಬೆಂಗಳೂರು ಹಬ್ಬ...
ಕುಲಶಾಸ್ತ್ರ ಅಧ್ಯಯನಕ್ಕೆ ಎನ್.ಯು.ನಾಚಪ್ಪ ಆಕ್ಷೇಪ
ಕುಲಶಾಸ್ತ್ರ ಅಧ್ಯಯನಕ್ಕೆ ಎನ್.ಯು.ನಾಚಪ್ಪ ಆಕ್ಷೇಪ
ಮೈಸೂರು: ವಿರಾಜಪೇಟೆಯ ಬಿಟ್ಟಂಗಾಲದಲ್ಲಿ ಕುಲಶಾಸ್ತ್ರ ಅಧ್ಯಯನದ ನೆಪದಲ್ಲಿ ಸಮಾವೇಶ ನಡೆಸಿ, ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳ ದಾರಿತಪ್ಪಿಸಲಾಗಿದೆ. ಕೊಡವರ ಹೆಸರಿನಲ್ಲಿ ಇತರೆ ಪಂಗಡದವರ ಅಧ್ಯಯನಕ್ಕೆ ತೊಡಗಿರುವುದು ಆಕ್ಷೇಪಾರ್ಹ. ಈ...
ಸಂಸದರಿಗೆ 5 ಕೋಟಿ ಅನುದಾನ ನಿಗಧಿ : ಅಲೋಕ್ ಶೇಖರ್
ಸಂಸದರಿಗೆ 5 ಕೋಟಿ ಅನುದಾನ ನಿಗಧಿ : ಅಲೋಕ್ ಶೇಖರ್
ಬೆಂಗಳೂರು: ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃಧ್ಧಿ ಯೋಜನೆಯ ಅನುಷ್ಟಾನಕ್ಕೆ ವಾರ್ಷಿಕವಾರು ಪ್ರತಿಯೊಬ್ಬ ಸಂಸತ್ ಸದಸ್ಯರಿಗೆ ಭಾರತ ಸರ್ಕಾರವು ರೂ.5 ಕೋಟಿ ರೂಪಾಯಿಗಳ ಅನುದಾನ ನಿಗಧಿ ಮಾಡಿದೆ ಎಂದು ಭಾರತ ಸರ್ಕಾರದ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಟಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅಲೋಕ್ ಶೇಖರ್ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದ, ಈ ಯೋಜನೆಯಡಿ ಮಾರ್ಗಸೂಚಿ ಇದ್ದು, ಸದರಿ ಅನುದಾನವನ್ನು ನೇರವಾಗಿ ನೋಡಲ್ ಜಿಲ್ಲಾಧಿಕಾರಿಗಳಿಗೆ ಬಿಡುಗಡೆಗೊಳಿಸಲಾಗುತ್ತಿದ್ದು, ಸಂಸತ್ ಸದಸ್ಯರು ಶಿಫಾರಸ್ಸು ಮಾಡುವ ಸ್ಥಳೀಯವಾಗಿ ಅವಶ್ಯವಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾತನಾಡಿ, ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದ್ದು, 1ನೇ ಏಪ್ರಿಲ್ 2023 ರಿಂದ ಜಾರಿಗೆ ತರಲು ಉದ್ದೇಶಿಸಲಾಗಿದೆ. ಪರಿಷ್ಕೃತ ಮಾರ್ಗಸೂಚಿ ಪ್ರಕಾರ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದೊಂದಿಗೆ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿ ಬಿಡುಗಡೆ ಮಾಡಲು ಹೊಸದಾಗಿ ಅಂತರ್ಜಾಲವನ್ನು ಅಭಿವೃದ್ಧಿಪಡಿಸಲಾಗಿದೆ.
ಹೊಸದಾಗಿ ಅಭಿವೃದ್ಧಿಪಡಿಸಲಾದ ಆನ್ಲೈನ್ ವ್ಯವಸ್ಥೆ ಮೂಲಕ ಸಂಬಂಧಪಟ್ಟ ಅನುಷ್ಠಾನ ಸಂಸ್ಥೆಗಳಿಗೆ ಹಾಗೂ ಮಾರಾಟಗಾರರಿಗೆ ನೇರವಾಗಿ ನಿಧಿ ಬಿಡುಗಡೆಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಅಧಿಕಾರಿಗಳು, ಅಂತರ್ ರಾಜ್ಯಗಳೊಂದಿಗೆ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ವಿಷಯವನ್ನು ನಿರ್ವಹಿಸುವಂತಹ ಅಧಿಕಾರಿ ಹಾಗೂ ಸಿಬ್ಬಂದಿಯವರೊಂದಿಗೆ ಸಮಗ್ರವಾಗಿ ಚರ್ಚಿಸಲು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಾಗಾರದಲ್ಲಿ ಭಾರತ ಸರ್ಕಾರದ ಉಪ ಮಹಾನಿರ್ದೇಶಕರಾದ ಅರಿನ್ದಮ್ ಮೊದಕ್, ಉಪನಿರ್ದೇಶಕ ವಿಕಾಸ್ ನಿಗಮ್, ಕಿರಿಯ ಅಂಕಿಅಂಶ ಅಧಿಕಾರಿ ವಿವೇಕ್ ಸಿಂಗ್ ಹಾಗೂ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ವಿಷಯವನ್ನು ನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಏ ಮೋದಿ, ಏನಪ್ಪ ನಿಂದು ಅಂದಾ ದರ್ಬಾರ್: ವಿಶ್ವನಾಥ್ ಆಕ್ರೋಶ
ಏ ಮೋದಿ, ಏನಪ್ಪ ನಿಂದು ಅಂದಾ ದರ್ಬಾರ್: ವಿಶ್ವನಾಥ್ ಆಕ್ರೋಶ
ಮೈಸೂರು: ಏ ಮೋದಿ, ಏನಪ್ಪ ನಿಂದು ಅಂದಾ ದರ್ಬಾರ್. ಚರ್ಚೆಯಿಲ್ಲದೆ ಕಾಯ್ದೆಗಳು ಪಾಸ್ ಆಗುತ್ತವೆ. ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ. ನಿಮ್ಮ...
ನೀನಾಸಂ ಸತೀಶ್ ಸ್ವೀಪ್ ಯೂತ್ ಐಕಾನ್
ನೀನಾಸಂ ಸತೀಶ್ ಸ್ವೀಪ್ ಯೂತ್ ಐಕಾನ್
ಮಂಡ್ಯ: ಚುನಾವಣೆಯಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಮತದಾರನ ಕರ್ತವ್ಯವಾಗಿದೆ. ಹೀಗಿರುವಾಗ ಯುವ ಮತದಾರರಿಗೆ ಮತದಾನದ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದ್ದು ಮಂಡ್ಯ ಜಿಲ್ಲೆಗೆ ನಟ ನೀನಾಸಂ ಸತೀಶ್ ಯೂತ್...
ಇಂದು ಹಿಮವದ್ ಗೋಪಾಲಸ್ವಾಮಿ ರಥೋತ್ಸವ
ಇಂದು ಹಿಮವದ್ ಗೋಪಾಲಸ್ವಾಮಿ ರಥೋತ್ಸವ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಶ್ರೀ ಹಿಮವದ್ ಗೋಪಾಲಸ್ವಾಮಿಯವರ ಬ್ರಹ್ಮ ರಥೋತ್ಸವವು ಮಾರ್ಚ್ 18ರಂದು ನಡೆಯಲಿದ್ದು, ಈ ಸಂಬಂಧ ಮಾರ್ಚ್ 16ರಿಂದಲೇ 21ರವರೆಗೆ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.
ಮಾರ್ಚ್...
ಈ ಬಾರಿ ಕಾಂಗ್ರೆಸ್ ಗೆಲ್ಲಿಸಿ ನನಗೆ ಶಕ್ತಿ ನೀಡಿ:ಡಿಕೆಶಿ
ಈ ಬಾರಿ ಕಾಂಗ್ರೆಸ್ ಗೆಲ್ಲಿಸಿ ನನಗೆ ಶಕ್ತಿ ನೀಡಿ:ಡಿಕೆಶಿ
ರಾಮನಗರ: ಹಿಂದಿನ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದವರಿಗೆ ಅವಕಾಶ ಕೊಟ್ಟಿದ್ದೀರಿ. ಈ ಬಾರಿ ಕಾಂಗ್ರೆಸ್ ಗೆಲ್ಲಿಸಿ ನನಗೆ ಶಕ್ತಿ ತುಂಬುವ ಮೂಲಕ ರಾಮನಗರದಲ್ಲಿ ಬದಲಾವಣೆ ತರಬೇಕು...
ಮಹಿಳಾ ಸಬಲೀಕರಣಕ್ಕೆ ಉತ್ತೇಜನ: ಸಿಎಂ ಬೊಮ್ಮಾಯಿ
ಮಹಿಳಾ ಸಬಲೀಕರಣಕ್ಕೆ ಉತ್ತೇಜನ: ಸಿಎಂ ಬೊಮ್ಮಾಯಿ
ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಸ್ವಸಹಾಯ ಗುಂಪುಗಳಿಗೆ 100 ಕೋಟಿ ಹಣ ನೀಡಲಾಗಿದ್ದು, ಈ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ...
ಕೃಷಿ ಇಲಾಖೆ ಶತಮಾನೋತ್ಸವದ ಸಂಗಮ ಸಭಾಂಗಣ ಉದ್ಘಾಟನೆ
ಕೃಷಿ ಇಲಾಖೆ ಶತಮಾನೋತ್ಸವದ ಸಂಗಮ ಸಭಾಂಗಣ ಉದ್ಘಾಟನೆ
ಬೆಂಗಳೂರು: ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಕೃಷಿ ಆಯುಕ್ತಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶತಮಾನೋತ್ಸವದ "ಸಂಗಮ ಸಭಾಂಗಣ” ಕಟ್ಟಡವನ್ನು ಕೃಷಿ ಸಚಿವ ಬಿ.ಸಿ. ಪಾಟಿಲ್ ಉದ್ಘಾಟಿಸಿದರು.
ಸಂಗಮ ಸಭಾಂಗಣವನ್ನು...